Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...