Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...