Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...