Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...