Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...