Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

- Advertisement -
- Advertisement -

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್ (34) ಅವರ ವಿರುದ್ಧ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ ಮೂರು ದಿನಗಳ ನಂತರ, ನವೆಂಬರ್ 20 ರ ಭಾನುವಾರದಂದು ಬೆಂಗಳೂರು ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಲ್ಲಿ ಚಿಲುಮೆ ಸಂಸ್ಥೆಯನ್ನು ರಿಜಿಸ್ಟರ್‌‌ ಮಾಡಿದವರಲ್ಲಿ ರವಿಕುಮಾರ್ ಒಬ್ಬರಾಗಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಎನ್‌ಜಿಒ ಹಿಂದಿನ ಪ್ರಮುಖ ವ್ಯಕ್ತಿಯಾಗಿದ್ದಾರೆ. ದಿ ನ್ಯೂಸ್‌ ಮಿನಿಟ್‌ ಮತ್ತು ಪ್ರತಿಧ್ವನಿ ಸುದ್ದಿ ಪೋರ್ಟಾಲ್‌ ನಡೆಸಿದ ಜಂಟಿ ವರದಿಯು ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವ ಅವರ ಎನ್‌ಜಿಒದ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಲ್ಲನಾಯಕನ ಹಳ್ಳಿಯವರಾದ ರವಿಕುಮಾರ್‌ ಅವರ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದಂತೆ ಅವರು ಉತ್ತರ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಹಗರಣ ಬಯಲಾದ ನಂತರ ಅವರು ನಿರಂತರವಾಗಿ ಸಂಚರಿಸುತ್ತಲೆ ಇದ್ದು, ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ವಕೀಲರೊಬ್ಬರ ಬಳಿ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಸಂಸ್ಥೆಯ ಕ್ಷೇತ್ರ ಕಾರ್ಯಕರ್ತರು ಬಳಸಿದ ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಮಾಣವನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಚಿಲುಮೆಯ ಕಚೇರಿಗಳಿಂದ ವಶಪಡಿಸಿಕೊಂಡ ದಾಖಲೆಗಳು, ಅವರ ಫೋನ್, ಇಮೇಲ್ ಮೂಲಕ ರಾಜಕಾರಣಿಗಳಿಗೂ ಅವರಿಗೂ ಇರುವ ಲಿಂಕ್‌ಗಳನ್ನು ಸಹ ಪರಿಶೀಲಿಸುತ್ತಿದ್ದೇವೆ ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ಹೇಳಿದೆ.

ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್ ಡೆವಲಪರ್‌ಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಮತದಾರರ ಮಾಹಿತಿಯನ್ನು ಕದಿಯಲು ಚುನಾವಣಾ ಅಧಿಕಾರಿಗಳಂತೆ ನಟಿಸುವ ಕ್ಷೇತ್ರ ಕಾರ್ಯಕರ್ತರನ್ನು ಎನ್‌ಜಿಒ ನಿಯೋಜಿಸಿದೆ ಎಂದು ತನಿಖಾ ವರದಿಯಲ್ಲಿ ನ್ಯೂಸ್ ಮಿನಿಟ್ ಹೇಳಿತ್ತು. ಇಷ್ಟೆ ಅಲ್ಲದೆ, ಚಿಲುಮೆ ಸಂಸ್ಥೆಯು ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಪರಿಣತಿ ಹೊಂದಿರುವ ಚಿಲುಮೆ ಎಂಟರ್‌ಪ್ರೈಸಸ್ ಎಂಬ ಖಾಸಗಿ ಕಂಪನಿಯನ್ನು ಸಹ ನಡೆಸುತ್ತಿದೆ.

ಕಂಪೆನಿಯ ವೆಬ್‌ಸೈಟ್‌ ಇದೀಗ ನಿಷ್ಕ್ರಿಯವಾಗಿದ್ದು, ಅದರಲ್ಲಿ ರಾಜಕೀಯ ಪಕ್ಷಗಳಿಗೆ, “ವಿದ್ಯುನ್ಮಾನ ಮತಯಂತ್ರ ಮತ್ತು ಎಣಿಕೆ ಹಾಲ್ ತಯಾರಿ, ಸಿಸಿಟಿವಿ ಅಳವಡಿಕೆ, ವೆಬ್‌ಕಾಸ್ಟಿಂಗ್ ಮತ್ತು ಚೆಕ್-ಪೋಸ್ಟ್ ತಯಾರಿ” ಮಾಡುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ಈ ವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ರವಿಕುಮಾರ್‌ ಅವರ ಹಿರಿಯ ಸಹೋದರ ಕೆಂಪೇಗೌಡ, ಎನ್‌ಜಿಒದ ಮೂವರು ಉದ್ಯೋಗಿಗಳಾದ ನಿರ್ದೇಶಕ ರೇಣುಕಾ ಪ್ರಸಾದ್, ಎಚ್‌ಆರ್ ಎಕ್ಸಿಕ್ಯೂಟಿವ್ ಧರ್ಮೇಶ್ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ನವೆಂಬರ್ 18 ರ ಶುಕ್ರವಾರ ರಾತ್ರಿ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...