Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

- Advertisement -
- Advertisement -

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್ (34) ಅವರ ವಿರುದ್ಧ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ ಮೂರು ದಿನಗಳ ನಂತರ, ನವೆಂಬರ್ 20 ರ ಭಾನುವಾರದಂದು ಬೆಂಗಳೂರು ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಲ್ಲಿ ಚಿಲುಮೆ ಸಂಸ್ಥೆಯನ್ನು ರಿಜಿಸ್ಟರ್‌‌ ಮಾಡಿದವರಲ್ಲಿ ರವಿಕುಮಾರ್ ಒಬ್ಬರಾಗಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಎನ್‌ಜಿಒ ಹಿಂದಿನ ಪ್ರಮುಖ ವ್ಯಕ್ತಿಯಾಗಿದ್ದಾರೆ. ದಿ ನ್ಯೂಸ್‌ ಮಿನಿಟ್‌ ಮತ್ತು ಪ್ರತಿಧ್ವನಿ ಸುದ್ದಿ ಪೋರ್ಟಾಲ್‌ ನಡೆಸಿದ ಜಂಟಿ ವರದಿಯು ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವ ಅವರ ಎನ್‌ಜಿಒದ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಲ್ಲನಾಯಕನ ಹಳ್ಳಿಯವರಾದ ರವಿಕುಮಾರ್‌ ಅವರ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದಂತೆ ಅವರು ಉತ್ತರ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಹಗರಣ ಬಯಲಾದ ನಂತರ ಅವರು ನಿರಂತರವಾಗಿ ಸಂಚರಿಸುತ್ತಲೆ ಇದ್ದು, ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ವಕೀಲರೊಬ್ಬರ ಬಳಿ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಸಂಸ್ಥೆಯ ಕ್ಷೇತ್ರ ಕಾರ್ಯಕರ್ತರು ಬಳಸಿದ ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಮಾಣವನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಚಿಲುಮೆಯ ಕಚೇರಿಗಳಿಂದ ವಶಪಡಿಸಿಕೊಂಡ ದಾಖಲೆಗಳು, ಅವರ ಫೋನ್, ಇಮೇಲ್ ಮೂಲಕ ರಾಜಕಾರಣಿಗಳಿಗೂ ಅವರಿಗೂ ಇರುವ ಲಿಂಕ್‌ಗಳನ್ನು ಸಹ ಪರಿಶೀಲಿಸುತ್ತಿದ್ದೇವೆ ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ಹೇಳಿದೆ.

ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್ ಡೆವಲಪರ್‌ಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಮತದಾರರ ಮಾಹಿತಿಯನ್ನು ಕದಿಯಲು ಚುನಾವಣಾ ಅಧಿಕಾರಿಗಳಂತೆ ನಟಿಸುವ ಕ್ಷೇತ್ರ ಕಾರ್ಯಕರ್ತರನ್ನು ಎನ್‌ಜಿಒ ನಿಯೋಜಿಸಿದೆ ಎಂದು ತನಿಖಾ ವರದಿಯಲ್ಲಿ ನ್ಯೂಸ್ ಮಿನಿಟ್ ಹೇಳಿತ್ತು. ಇಷ್ಟೆ ಅಲ್ಲದೆ, ಚಿಲುಮೆ ಸಂಸ್ಥೆಯು ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಪರಿಣತಿ ಹೊಂದಿರುವ ಚಿಲುಮೆ ಎಂಟರ್‌ಪ್ರೈಸಸ್ ಎಂಬ ಖಾಸಗಿ ಕಂಪನಿಯನ್ನು ಸಹ ನಡೆಸುತ್ತಿದೆ.

ಕಂಪೆನಿಯ ವೆಬ್‌ಸೈಟ್‌ ಇದೀಗ ನಿಷ್ಕ್ರಿಯವಾಗಿದ್ದು, ಅದರಲ್ಲಿ ರಾಜಕೀಯ ಪಕ್ಷಗಳಿಗೆ, “ವಿದ್ಯುನ್ಮಾನ ಮತಯಂತ್ರ ಮತ್ತು ಎಣಿಕೆ ಹಾಲ್ ತಯಾರಿ, ಸಿಸಿಟಿವಿ ಅಳವಡಿಕೆ, ವೆಬ್‌ಕಾಸ್ಟಿಂಗ್ ಮತ್ತು ಚೆಕ್-ಪೋಸ್ಟ್ ತಯಾರಿ” ಮಾಡುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ಈ ವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ರವಿಕುಮಾರ್‌ ಅವರ ಹಿರಿಯ ಸಹೋದರ ಕೆಂಪೇಗೌಡ, ಎನ್‌ಜಿಒದ ಮೂವರು ಉದ್ಯೋಗಿಗಳಾದ ನಿರ್ದೇಶಕ ರೇಣುಕಾ ಪ್ರಸಾದ್, ಎಚ್‌ಆರ್ ಎಕ್ಸಿಕ್ಯೂಟಿವ್ ಧರ್ಮೇಶ್ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ನವೆಂಬರ್ 18 ರ ಶುಕ್ರವಾರ ರಾತ್ರಿ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...