Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

- Advertisement -
- Advertisement -

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್ (34) ಅವರ ವಿರುದ್ಧ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ ಮೂರು ದಿನಗಳ ನಂತರ, ನವೆಂಬರ್ 20 ರ ಭಾನುವಾರದಂದು ಬೆಂಗಳೂರು ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಲ್ಲಿ ಚಿಲುಮೆ ಸಂಸ್ಥೆಯನ್ನು ರಿಜಿಸ್ಟರ್‌‌ ಮಾಡಿದವರಲ್ಲಿ ರವಿಕುಮಾರ್ ಒಬ್ಬರಾಗಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಎನ್‌ಜಿಒ ಹಿಂದಿನ ಪ್ರಮುಖ ವ್ಯಕ್ತಿಯಾಗಿದ್ದಾರೆ. ದಿ ನ್ಯೂಸ್‌ ಮಿನಿಟ್‌ ಮತ್ತು ಪ್ರತಿಧ್ವನಿ ಸುದ್ದಿ ಪೋರ್ಟಾಲ್‌ ನಡೆಸಿದ ಜಂಟಿ ವರದಿಯು ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವ ಅವರ ಎನ್‌ಜಿಒದ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಲ್ಲನಾಯಕನ ಹಳ್ಳಿಯವರಾದ ರವಿಕುಮಾರ್‌ ಅವರ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದಂತೆ ಅವರು ಉತ್ತರ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಹಗರಣ ಬಯಲಾದ ನಂತರ ಅವರು ನಿರಂತರವಾಗಿ ಸಂಚರಿಸುತ್ತಲೆ ಇದ್ದು, ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ವಕೀಲರೊಬ್ಬರ ಬಳಿ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಸಂಸ್ಥೆಯ ಕ್ಷೇತ್ರ ಕಾರ್ಯಕರ್ತರು ಬಳಸಿದ ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಮಾಣವನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಚಿಲುಮೆಯ ಕಚೇರಿಗಳಿಂದ ವಶಪಡಿಸಿಕೊಂಡ ದಾಖಲೆಗಳು, ಅವರ ಫೋನ್, ಇಮೇಲ್ ಮೂಲಕ ರಾಜಕಾರಣಿಗಳಿಗೂ ಅವರಿಗೂ ಇರುವ ಲಿಂಕ್‌ಗಳನ್ನು ಸಹ ಪರಿಶೀಲಿಸುತ್ತಿದ್ದೇವೆ ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ಹೇಳಿದೆ.

ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್ ಡೆವಲಪರ್‌ಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಮತದಾರರ ಮಾಹಿತಿಯನ್ನು ಕದಿಯಲು ಚುನಾವಣಾ ಅಧಿಕಾರಿಗಳಂತೆ ನಟಿಸುವ ಕ್ಷೇತ್ರ ಕಾರ್ಯಕರ್ತರನ್ನು ಎನ್‌ಜಿಒ ನಿಯೋಜಿಸಿದೆ ಎಂದು ತನಿಖಾ ವರದಿಯಲ್ಲಿ ನ್ಯೂಸ್ ಮಿನಿಟ್ ಹೇಳಿತ್ತು. ಇಷ್ಟೆ ಅಲ್ಲದೆ, ಚಿಲುಮೆ ಸಂಸ್ಥೆಯು ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಪರಿಣತಿ ಹೊಂದಿರುವ ಚಿಲುಮೆ ಎಂಟರ್‌ಪ್ರೈಸಸ್ ಎಂಬ ಖಾಸಗಿ ಕಂಪನಿಯನ್ನು ಸಹ ನಡೆಸುತ್ತಿದೆ.

ಕಂಪೆನಿಯ ವೆಬ್‌ಸೈಟ್‌ ಇದೀಗ ನಿಷ್ಕ್ರಿಯವಾಗಿದ್ದು, ಅದರಲ್ಲಿ ರಾಜಕೀಯ ಪಕ್ಷಗಳಿಗೆ, “ವಿದ್ಯುನ್ಮಾನ ಮತಯಂತ್ರ ಮತ್ತು ಎಣಿಕೆ ಹಾಲ್ ತಯಾರಿ, ಸಿಸಿಟಿವಿ ಅಳವಡಿಕೆ, ವೆಬ್‌ಕಾಸ್ಟಿಂಗ್ ಮತ್ತು ಚೆಕ್-ಪೋಸ್ಟ್ ತಯಾರಿ” ಮಾಡುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ಈ ವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ರವಿಕುಮಾರ್‌ ಅವರ ಹಿರಿಯ ಸಹೋದರ ಕೆಂಪೇಗೌಡ, ಎನ್‌ಜಿಒದ ಮೂವರು ಉದ್ಯೋಗಿಗಳಾದ ನಿರ್ದೇಶಕ ರೇಣುಕಾ ಪ್ರಸಾದ್, ಎಚ್‌ಆರ್ ಎಕ್ಸಿಕ್ಯೂಟಿವ್ ಧರ್ಮೇಶ್ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ನವೆಂಬರ್ 18 ರ ಶುಕ್ರವಾರ ರಾತ್ರಿ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...