Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

- Advertisement -
- Advertisement -

ದಿ ನ್ಯೂಸ್ ಮಿನಿಟ್‌ ಬಹಿರಂಗಡಿಸಿರುವ ತನಿಖಾ ವರದಿಯ ನಂತರ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನದಲ್ಲಿ ತೊಡಗಿರುವ ‘ಚಿಲುಮೆ ಎಜುಕೇಶನಲ್ ಕಲ್ಚರಲ್ ಮತ್ತು ರೂರಲ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್’ ಎಂಬ ಎನ್‌ಜಿಒ ಸಂಸ್ಥೆಯ ಇಬ್ಬರು ಉದ್ಯೋಗಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚಿಲುಮೆಯ ನಿರ್ದೇಶಕ ರೇಣುಕಾ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಸಿಬ್ಬಂದಿ ಧರ್ಮೇಶ್ ಎಂದು ಗುರುತಿಸಲಾಗಿದ್ದು, ಹಲಸೂರು ಗೇಟ್ ಠಾಣೆಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ಅವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದಾಗ್ಯೂ, ಚಿಲುಮೆಯ ನಿರ್ದೇಶಕರೊಬ್ಬರಲ್ಲಾದ ಕೃಷ್ಣಪ್ಪ ರವಿಕುಮಾರ್‌ ಇನ್ನೂ ನಾಪತ್ತೆಯಾಗಿದ್ದು, ಅವರ ಬಂಧನ ಇನ್ನು ನಡೆದಿಲ್ಲ. ಅವರು 2013 ರಲ್ಲಿ ಟ್ರಸ್ಟ್ ಅನ್ನು ನೋಂದಾಯಿಸಿದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಚಿಲುಮೆ ಸಂಸ್ಥೆಯ ಪ್ರಮುಖ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿಗಳಲ್ಲೂ ಪೊಲೀಸ್ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಚುನಾವಣಾ ಅಧಿಕಾರಿಗಳ ಸೋಗು ಹಾಕಿ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಯಕರ್ತರನ್ನು ಕಳುಹಿಸುವ ಮೂಲಕ ಸಂಸ್ಥೆಯು ಮತದಾರರ ಮಾಹಿತಿಯನ್ನು ಗುಪ್ತವಾಗಿ ಸಂಗ್ರಹಣೆ ಮಾಡಿರುವುದನ್ನು ನ್ಯೂಸ್‌ ಮಿನಿಟ್‌ ತನಿಖಾ ವರದಿ ಮಾಡಿತ್ತು. ಇದರ ನಂತರ ಬೆಂಗಳೂರು ಪೊಲೀಸರು ಚಿಲುಮೆ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದರ ನಂತರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರ ದೂರಿನ ಆಧಾರದ ಮೇಲೆ  ಚಿಲುಮೆ ವಿರುದ್ಧ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಫೋರ್ಜರಿ ಆರೋಪವನ್ನು ದೂರಿನಲ್ಲಿ ಮಾಡಲಾಗಿದೆ. ಎಫ್‌ಐಆರ್‌‌ ಚಿಲುಮೆ ನಿಯೋಜಿಸಿದ ಕ್ಷೇತ್ರಕಾರ್ಯಕರ್ತ ಲೋಕೇಶ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಮಹದೇವಪುರ ಚುನಾವಣಾ ನೋಂದಣಿ ಅಧಿಕಾರಿ ಚಂದ್ರಶೇಖರ್ ನೀಡಿದ ಮತ್ತೊಂದು ದೂರಿನ ಮೇರೆಗೆ ನಗರದ ಮಹದೇವಪುರದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ದೂರಿನಲ್ಲಿ ಕೂಡಾ ಲೋಕೇಶ್ ಅವರನ್ನು ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿದೆ.

ಚುನಾವಣಾ ಅಧಿಕಾರಿಗಳನ್ನು ಯಾಮಾರಿಸಿ ಬೆಂಗಳೂರಿನಲ್ಲಿ ಮತದಾರರ ಡೇಟಾವನ್ನು ಗುಪ್ತವಾಗಿ ಸಂಗ್ರಹಿಸಲು ಚಿಲುಮೆಯಿಂದ ನಿಯೋಜಿಸಲ್ಪಟ್ಟ ಅನೇಕ ಯುವಕರೊಂದಿಗೆ ನ್ಯೂಸ್ ಮಿನಿಟ್‌‌ ಸ್ವತಂತ್ರವಾಗಿ ಮಾತನಾಡಿದ್ದು, ಹಗರಣವನ್ನು ಬಯಲಿಗೆಳೆದ್ದು, ಸರಣಿ ವರದಿಯನ್ನು ಮಾಡಿದೆ. ಈ ವರದಿಯನ್ನು ನ್ಯೂಸ್‌ ಮಿನಿಟ್‌‌ ನವೆಂಬರ್ 16 ರಂದು ಪ್ರಕಟಿಸಿದ್ದು, ತನಿಖಾ ವರದಿಯನ್ನು ನ್ಯೂಸ್ ಮಿನಿಟ್‌ ಮತ್ತು ‘ಪ್ರತಿಧ್ವನಿ’ ಜಂಟಿಯಾಗಿ ನಡೆಸಿತ್ತು.

ಮತದಾನದ ಹಕ್ಕುಗಳು ಮತ್ತು ಮತದಾರರ ಪಟ್ಟಿಗಳ ಪರಿಷ್ಕರಣೆ ಕುರಿತು ‘ಜಾಗೃತಿ ಮೂಡಿಸಲು’ ಚಿಲುಮೆಗೆ ನೀಡಿದ್ದ ಸರ್ಕಾರಿ ಆದೇಶವನ್ನು ದುರುಪಯೋಗಪಡಿಸಿದ್ದ ಸಂಸ್ಥೆಯು ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿಕೊಂಡಿದೆ ಎಂದು ನ್ಯೂಸ್ ಮಿನಿಟ್‌ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಚುನಾವಣಾ ಸಮೀಕ್ಷೆಗಳೆಂಬ ಏಜೆಂಟ್‌ಗಳು; ಮತದಾರರನ್ನು ಸುಲಭವಾಗಿ ದಾರಿ ತಪ್ಪಿಸುತ್ತವೆ!

ಬಿಜೆಪಿಯ ಮಾಜಿ ಶಾಸಕ ನಂದೀಶ ರೆಡ್ಡಿ ಅವರು ಮತದಾರರ ದತ್ತಾಂಶ ಸಮೀಕ್ಷೆಗಾಗಿ ಚಿಲುಮೆಗೆ 18 ಲಕ್ಷ ರೂ. ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...