Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

- Advertisement -
- Advertisement -

ದಿ ನ್ಯೂಸ್ ಮಿನಿಟ್‌ ಬಹಿರಂಗಡಿಸಿರುವ ತನಿಖಾ ವರದಿಯ ನಂತರ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನದಲ್ಲಿ ತೊಡಗಿರುವ ‘ಚಿಲುಮೆ ಎಜುಕೇಶನಲ್ ಕಲ್ಚರಲ್ ಮತ್ತು ರೂರಲ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್’ ಎಂಬ ಎನ್‌ಜಿಒ ಸಂಸ್ಥೆಯ ಇಬ್ಬರು ಉದ್ಯೋಗಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚಿಲುಮೆಯ ನಿರ್ದೇಶಕ ರೇಣುಕಾ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಸಿಬ್ಬಂದಿ ಧರ್ಮೇಶ್ ಎಂದು ಗುರುತಿಸಲಾಗಿದ್ದು, ಹಲಸೂರು ಗೇಟ್ ಠಾಣೆಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ಅವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದಾಗ್ಯೂ, ಚಿಲುಮೆಯ ನಿರ್ದೇಶಕರೊಬ್ಬರಲ್ಲಾದ ಕೃಷ್ಣಪ್ಪ ರವಿಕುಮಾರ್‌ ಇನ್ನೂ ನಾಪತ್ತೆಯಾಗಿದ್ದು, ಅವರ ಬಂಧನ ಇನ್ನು ನಡೆದಿಲ್ಲ. ಅವರು 2013 ರಲ್ಲಿ ಟ್ರಸ್ಟ್ ಅನ್ನು ನೋಂದಾಯಿಸಿದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಚಿಲುಮೆ ಸಂಸ್ಥೆಯ ಪ್ರಮುಖ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿಗಳಲ್ಲೂ ಪೊಲೀಸ್ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಚುನಾವಣಾ ಅಧಿಕಾರಿಗಳ ಸೋಗು ಹಾಕಿ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಯಕರ್ತರನ್ನು ಕಳುಹಿಸುವ ಮೂಲಕ ಸಂಸ್ಥೆಯು ಮತದಾರರ ಮಾಹಿತಿಯನ್ನು ಗುಪ್ತವಾಗಿ ಸಂಗ್ರಹಣೆ ಮಾಡಿರುವುದನ್ನು ನ್ಯೂಸ್‌ ಮಿನಿಟ್‌ ತನಿಖಾ ವರದಿ ಮಾಡಿತ್ತು. ಇದರ ನಂತರ ಬೆಂಗಳೂರು ಪೊಲೀಸರು ಚಿಲುಮೆ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದರ ನಂತರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರ ದೂರಿನ ಆಧಾರದ ಮೇಲೆ  ಚಿಲುಮೆ ವಿರುದ್ಧ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಫೋರ್ಜರಿ ಆರೋಪವನ್ನು ದೂರಿನಲ್ಲಿ ಮಾಡಲಾಗಿದೆ. ಎಫ್‌ಐಆರ್‌‌ ಚಿಲುಮೆ ನಿಯೋಜಿಸಿದ ಕ್ಷೇತ್ರಕಾರ್ಯಕರ್ತ ಲೋಕೇಶ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಮಹದೇವಪುರ ಚುನಾವಣಾ ನೋಂದಣಿ ಅಧಿಕಾರಿ ಚಂದ್ರಶೇಖರ್ ನೀಡಿದ ಮತ್ತೊಂದು ದೂರಿನ ಮೇರೆಗೆ ನಗರದ ಮಹದೇವಪುರದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ದೂರಿನಲ್ಲಿ ಕೂಡಾ ಲೋಕೇಶ್ ಅವರನ್ನು ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿದೆ.

ಚುನಾವಣಾ ಅಧಿಕಾರಿಗಳನ್ನು ಯಾಮಾರಿಸಿ ಬೆಂಗಳೂರಿನಲ್ಲಿ ಮತದಾರರ ಡೇಟಾವನ್ನು ಗುಪ್ತವಾಗಿ ಸಂಗ್ರಹಿಸಲು ಚಿಲುಮೆಯಿಂದ ನಿಯೋಜಿಸಲ್ಪಟ್ಟ ಅನೇಕ ಯುವಕರೊಂದಿಗೆ ನ್ಯೂಸ್ ಮಿನಿಟ್‌‌ ಸ್ವತಂತ್ರವಾಗಿ ಮಾತನಾಡಿದ್ದು, ಹಗರಣವನ್ನು ಬಯಲಿಗೆಳೆದ್ದು, ಸರಣಿ ವರದಿಯನ್ನು ಮಾಡಿದೆ. ಈ ವರದಿಯನ್ನು ನ್ಯೂಸ್‌ ಮಿನಿಟ್‌‌ ನವೆಂಬರ್ 16 ರಂದು ಪ್ರಕಟಿಸಿದ್ದು, ತನಿಖಾ ವರದಿಯನ್ನು ನ್ಯೂಸ್ ಮಿನಿಟ್‌ ಮತ್ತು ‘ಪ್ರತಿಧ್ವನಿ’ ಜಂಟಿಯಾಗಿ ನಡೆಸಿತ್ತು.

ಮತದಾನದ ಹಕ್ಕುಗಳು ಮತ್ತು ಮತದಾರರ ಪಟ್ಟಿಗಳ ಪರಿಷ್ಕರಣೆ ಕುರಿತು ‘ಜಾಗೃತಿ ಮೂಡಿಸಲು’ ಚಿಲುಮೆಗೆ ನೀಡಿದ್ದ ಸರ್ಕಾರಿ ಆದೇಶವನ್ನು ದುರುಪಯೋಗಪಡಿಸಿದ್ದ ಸಂಸ್ಥೆಯು ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿಕೊಂಡಿದೆ ಎಂದು ನ್ಯೂಸ್ ಮಿನಿಟ್‌ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಚುನಾವಣಾ ಸಮೀಕ್ಷೆಗಳೆಂಬ ಏಜೆಂಟ್‌ಗಳು; ಮತದಾರರನ್ನು ಸುಲಭವಾಗಿ ದಾರಿ ತಪ್ಪಿಸುತ್ತವೆ!

ಬಿಜೆಪಿಯ ಮಾಜಿ ಶಾಸಕ ನಂದೀಶ ರೆಡ್ಡಿ ಅವರು ಮತದಾರರ ದತ್ತಾಂಶ ಸಮೀಕ್ಷೆಗಾಗಿ ಚಿಲುಮೆಗೆ 18 ಲಕ್ಷ ರೂ. ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...