Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

- Advertisement -
- Advertisement -

ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡಿದ ಮೂವರು ಚುನಾವಣಾ ನೋಂದಣಿ ಅಧಿಕಾರಿಗಳನ್ನು (ಇಆರ್‌ಒ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ಅಮಾನತುಗೊಳಿಸಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ ಮಹದೇವಪುರದ ಇಆರ್‌ಒ ಕೆ. ಚಂದ್ರಶೇಖರ, ಚಿಕ್ಕಪೇಟೆ ಇಆರ್‌ಒ ವಿ.ಬಿ.ಭೀಮಾಶಂಕರ್‌, ಕಂದಾಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಶಿವಾಜಿನಗರದ ಇಆರ್‌ಒ ಸುಹೇಲ್‌ ಅಹಮದ್‌ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ, ಯಾವುದೇ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿ ಕಾರ್ಡ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಎಂದು ಬರೆದು ಸಂಸ್ಥೆಗೆ ಇಆರ್‌ಒ ಮೂಲಕ ಗುರುತಿನ ಚೀಟಿ ನೀಡಿರುವುದು ಕಂಡುಬಂದಿದೆ” ಎಂದು ಮಹದೇವಪುರ ಅಮಾನತು ಆದೇಶದಲ್ಲಿ ತಿಳಿಸಿದೆ.

ಶಿವಾಜಿನಗರದ ಆದೇಶದಲ್ಲಿ ಇಆರ್‌ಒ ಸುಹೇಲ್ ಅಹಮದ್ ಅವರು 14 ಬೂತ್ ಮಟ್ಟದ ಸಂಯೋಜಕ (ಬಿಎಲ್‌ಸಿ) ಕಾರ್ಡ್‌ಗಳನ್ನು ನೀಡಿದ್ದಾರೆ ಎಂದು ಹೆಚ್ಚುವರಿಯಾಗಿ ಉಲ್ಲೇಖಿಸಲಾಗಿದೆ.

ದಿ ನ್ಯೂಸ್ ಮಿನಿಟ್‌ ಮತ್ತು ಪ್ರತಿಧ್ವನಿ ನಡೆಸಿದ ಜಂಟಿ ತನಿಖಾ ವರದಿಯ ನಂತರ ಮತದಾರರರ ಮಾಹಿತಿ ಕಳ್ಳತನದ ಬೃಹತ್ ಹಗರಣ ಬಹಿರಂಗವಾಗಿದ್ದು, ಈ ವರೆಗೆ ಐವರನ್ನು ಬಂಧಿಸಲಾಗಿದೆ. ಅಲ್ಲದೆ ಹಗರಣದಲ್ಲಿ ಬಿಜೆಪಿಗೆ ನೇರ ಕೈವಾಡವಿದ್ದು, ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡಲಾಗಿತ್ತು ಎಂದು ಇತ್ತೀಚೆಗಿನ ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸರಿದೆಯೆಂದು ಹುಡುಕುವುದು ಹೇಗೆ? ಡಿಲೀಟ್‌ ಆಗಿದ್ದರೆ ಸೇರಿಸುವುದು ಹೇಗೆ?

ಚುನಾವಣಾ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಅನುಮತಿ ಪತ್ರವನ್ನು ದುರುಪಯೋಗ ಪಡಿಸಿಕೊಂಡಿರುವ ಚಿಲುಮೆ ಎಂಬ ಖಾಸಗಿ ಎನ್‌ಜಿಒ ಮನೆ-ಮನೆ ಸಮೀಕ್ಷೆಯ ಮೂಲಕ ಮತದಾರರ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ಆರೋಪಿಸಲಾಗಿದ್ದು, ಬಿಬಿಎಂಪಿ ಅನುಮತಿ ನೀಡುವಲ್ಲಿ ಕೂಡಾ ಅಕ್ರಮ ಎಸಗಿದೆ ಎಂದು ವರದಿಯಾಗಿದೆ. ಬಿಬಿಎಂಪಿಯಿಂದ BLO ಗಳೆಂದು ಗುರುತಿಸಿಕೊಂಡ ಏಜೆಂಟರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಲಾಗಿತ್ತು.

ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಚಿಕ್ಕಪೇಟೆ ಮೂರು ಕ್ಷೇತ್ರಗಳ ಸಮೀಕ್ಷೆಯನ್ನು ಚಿಲುಮೆ ಎನ್‌ಜಿಓದ ಏಜೆಂಟರು ಬಹುತೇಕ ಪೂರ್ಣಗೊಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ಅದಾಗ್ಯೂ ಏಜೆಂಟರುಗಳಿಗೆ, ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲಾಗುತ್ತಿದೆ ಎಂಬುದು ತಿಳಿದಿರಲಿಲ್ಲ ಎಂದು ವರದಿ ಹೇಳಿದೆ.

“ಸರ್ಕಾರವು ಅನುಮೋದಿಸಿದ ಕಾನೂನುಬದ್ಧ ಚಟುವಟಿಕೆಯನ್ನು ನಾವು ಮಾಡುತ್ತಿದ್ದೇವೆ ಎಂದು ಭಾವಿಸಿದ್ದೆವು” ಎಂದು ಏಜೆಂಟರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಏಜೆಂಟ್‌ಗಳಾಗಿ ಸೇರಿದ್ದ ಹಲವರು ವೇತನ ಪಾವತಿಸದ ಕಾರಣ ಮತ್ತು ಕೆಲಸದ ಭಯಾನಕ ಪರಿಸ್ಥಿತಿಗಳಿಂದಾಗಿ ಕೆಲಸವನ್ನು ತೊರೆದಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಭಾನುವಾರ ಚಿಲುಮೆಯ ನಿರ್ದೇಶಕ ರವಿಕುಮಾರ್ ಕೃಷ್ಣಪ್ಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ನವೆಂಬರ್ 17 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರು ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ನಕಲಿ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬಯಲಾದ ಮೂರು ದಿನಗಳವರೆಗೆ ಅವರು ತಲೆಮರೆಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...