Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

- Advertisement -
- Advertisement -

ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡಿದ ಮೂವರು ಚುನಾವಣಾ ನೋಂದಣಿ ಅಧಿಕಾರಿಗಳನ್ನು (ಇಆರ್‌ಒ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ಅಮಾನತುಗೊಳಿಸಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ ಮಹದೇವಪುರದ ಇಆರ್‌ಒ ಕೆ. ಚಂದ್ರಶೇಖರ, ಚಿಕ್ಕಪೇಟೆ ಇಆರ್‌ಒ ವಿ.ಬಿ.ಭೀಮಾಶಂಕರ್‌, ಕಂದಾಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಶಿವಾಜಿನಗರದ ಇಆರ್‌ಒ ಸುಹೇಲ್‌ ಅಹಮದ್‌ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ, ಯಾವುದೇ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿ ಕಾರ್ಡ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಎಂದು ಬರೆದು ಸಂಸ್ಥೆಗೆ ಇಆರ್‌ಒ ಮೂಲಕ ಗುರುತಿನ ಚೀಟಿ ನೀಡಿರುವುದು ಕಂಡುಬಂದಿದೆ” ಎಂದು ಮಹದೇವಪುರ ಅಮಾನತು ಆದೇಶದಲ್ಲಿ ತಿಳಿಸಿದೆ.

ಶಿವಾಜಿನಗರದ ಆದೇಶದಲ್ಲಿ ಇಆರ್‌ಒ ಸುಹೇಲ್ ಅಹಮದ್ ಅವರು 14 ಬೂತ್ ಮಟ್ಟದ ಸಂಯೋಜಕ (ಬಿಎಲ್‌ಸಿ) ಕಾರ್ಡ್‌ಗಳನ್ನು ನೀಡಿದ್ದಾರೆ ಎಂದು ಹೆಚ್ಚುವರಿಯಾಗಿ ಉಲ್ಲೇಖಿಸಲಾಗಿದೆ.

ದಿ ನ್ಯೂಸ್ ಮಿನಿಟ್‌ ಮತ್ತು ಪ್ರತಿಧ್ವನಿ ನಡೆಸಿದ ಜಂಟಿ ತನಿಖಾ ವರದಿಯ ನಂತರ ಮತದಾರರರ ಮಾಹಿತಿ ಕಳ್ಳತನದ ಬೃಹತ್ ಹಗರಣ ಬಹಿರಂಗವಾಗಿದ್ದು, ಈ ವರೆಗೆ ಐವರನ್ನು ಬಂಧಿಸಲಾಗಿದೆ. ಅಲ್ಲದೆ ಹಗರಣದಲ್ಲಿ ಬಿಜೆಪಿಗೆ ನೇರ ಕೈವಾಡವಿದ್ದು, ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡಲಾಗಿತ್ತು ಎಂದು ಇತ್ತೀಚೆಗಿನ ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸರಿದೆಯೆಂದು ಹುಡುಕುವುದು ಹೇಗೆ? ಡಿಲೀಟ್‌ ಆಗಿದ್ದರೆ ಸೇರಿಸುವುದು ಹೇಗೆ?

ಚುನಾವಣಾ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಅನುಮತಿ ಪತ್ರವನ್ನು ದುರುಪಯೋಗ ಪಡಿಸಿಕೊಂಡಿರುವ ಚಿಲುಮೆ ಎಂಬ ಖಾಸಗಿ ಎನ್‌ಜಿಒ ಮನೆ-ಮನೆ ಸಮೀಕ್ಷೆಯ ಮೂಲಕ ಮತದಾರರ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ಆರೋಪಿಸಲಾಗಿದ್ದು, ಬಿಬಿಎಂಪಿ ಅನುಮತಿ ನೀಡುವಲ್ಲಿ ಕೂಡಾ ಅಕ್ರಮ ಎಸಗಿದೆ ಎಂದು ವರದಿಯಾಗಿದೆ. ಬಿಬಿಎಂಪಿಯಿಂದ BLO ಗಳೆಂದು ಗುರುತಿಸಿಕೊಂಡ ಏಜೆಂಟರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಲಾಗಿತ್ತು.

ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಚಿಕ್ಕಪೇಟೆ ಮೂರು ಕ್ಷೇತ್ರಗಳ ಸಮೀಕ್ಷೆಯನ್ನು ಚಿಲುಮೆ ಎನ್‌ಜಿಓದ ಏಜೆಂಟರು ಬಹುತೇಕ ಪೂರ್ಣಗೊಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ಅದಾಗ್ಯೂ ಏಜೆಂಟರುಗಳಿಗೆ, ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲಾಗುತ್ತಿದೆ ಎಂಬುದು ತಿಳಿದಿರಲಿಲ್ಲ ಎಂದು ವರದಿ ಹೇಳಿದೆ.

“ಸರ್ಕಾರವು ಅನುಮೋದಿಸಿದ ಕಾನೂನುಬದ್ಧ ಚಟುವಟಿಕೆಯನ್ನು ನಾವು ಮಾಡುತ್ತಿದ್ದೇವೆ ಎಂದು ಭಾವಿಸಿದ್ದೆವು” ಎಂದು ಏಜೆಂಟರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಏಜೆಂಟ್‌ಗಳಾಗಿ ಸೇರಿದ್ದ ಹಲವರು ವೇತನ ಪಾವತಿಸದ ಕಾರಣ ಮತ್ತು ಕೆಲಸದ ಭಯಾನಕ ಪರಿಸ್ಥಿತಿಗಳಿಂದಾಗಿ ಕೆಲಸವನ್ನು ತೊರೆದಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಭಾನುವಾರ ಚಿಲುಮೆಯ ನಿರ್ದೇಶಕ ರವಿಕುಮಾರ್ ಕೃಷ್ಣಪ್ಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ನವೆಂಬರ್ 17 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರು ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ನಕಲಿ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬಯಲಾದ ಮೂರು ದಿನಗಳವರೆಗೆ ಅವರು ತಲೆಮರೆಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...