Homeಕರ್ನಾಟಕನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

"ನಾನು ಮತ್ತು ವಸಂತ ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು"

- Advertisement -
- Advertisement -

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ನಾನು ಮತ್ತು ವಸಂತ ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಅವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ” ಎಂದು ಸಿಎಂ ಹೇಳಿದರು.

“ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ” ಎಂದರು.

“ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ‘ವಿಶ್ವ ಮಾನವ’ ಮೌಲ್ಯವನ್ನು ಪಾಲಿಸಿದವರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿಯಾಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ, ಅವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು” ಎಂದು ಬಣ್ಣಿಸಿದರು.

“2023ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು” ಎಂದು ಸಿಎಂ ಹೇಳಿದರು.

“ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ, ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ” ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಸ್ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ: ಸಿಎಂ

ಬೆಳ್ತಂಗಡಿಯ ಕೇಂದ್ರ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಬೆಳ್ತಂಗಡಿಯ ವೃತ್ತದಲ್ಲಿ ಬಂಗೇರ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ : ರಾಜ್ಯದ 5,8,9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...