Homeಚಳವಳಿಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಮೋದಿ ನಾಯಕತ್ವದ ವಿರುದ್ಧ ಯುವಸಮೂಹ ತಿರುಗಿಬಿದ್ದಿದೆ. ದೇಶಾದ್ಯಂತ ತಟ್ಟೆ, ಲೋಟಗಳನ್ನು ಬಡಿಯುತ್ತಾ ನಿರುದ್ಯೋಗದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಹೆಚ್ಚುತ್ತಿದ್ದ ನಿರುದ್ಯೋಗ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಗರಿಷ್ಟ ಮಟ್ಟ ತಲುಪಿದೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲೂ ಯುವಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದು ಅವರು ರೊಚ್ಚಿಗೇಳುವಂತೆ ಪ್ರೇರೇಪಿಸಿದೆ ಎನ್ನಲಾಗುತ್ತಿದೆ.

ಇಷ್ಟು ದಿನ ರಸ್ತೆಗಳಲ್ಲಿ, ಕಚೇರಿಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ನಡೆಯುತ್ತಿದ್ದ ಪ್ರತಿಭಟನೆ ಈಗ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಒಂದಾಗಿ ತಟ್ಟೆ, ಲೋಟಗಳನ್ನು ಬಡಿಯುತ್ತಾ, ಹಾಡುಗಳನ್ನು ಹಾಡುತ್ತಾ ರಸ್ತೆಗಳಲ್ಲಿ ಸಾಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಓಡಿಸಲು ತಟ್ಟೆ ಬಡಿಯುವ ಸಲಹೆ ನೀಡಿದ್ದನೇ ಇವರು ನಿರುದ್ಯೋಗ ಓಡಿಸಲು ತಟ್ಟೆ, ಲೋಟಗಳನ್ನು ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ದೇಶದ ಜಿಡಿಪಿ ಅತ್ಯಂತ ಕೆಳಮಟ್ಟದಲ್ಲಿದೆ, ಲಾಕ್‌ಡೌನ್ ಸಮಯದಲ್ಲಿ ಕೋಟ್ಯಾಂತರ ಜನರ ಉದ್ಯೋಗಗಳು ಕಳೆದುಹೋಗಿವೆ, ಕಳೆದ 45 ವರ್ಷಗಳಲ್ಲಿ ನಿರುದ್ಯೋಗವು ಅತ್ಯಧಿಕವಾಗಿದೆ, ಇದಕ್ಕೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿ ಕಾರಣವಾಗಿವೆ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಯುವಜನತೆ ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ವಾಯಸೇನೆಯ ನಿವೃತ್ತ ಪೈಲಟ್ ರಾಜೀವ್ ತ್ಯಾಗಿ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಹಂಚಿಕೊಂಡಿದ್ದು, ಆ ಪೋಸ್ಟ್‌ ಅನ್ನು 300ಕ್ಕೂ ಅಧಿಕ ಮಂದಿ ಹಂಚಿಕೊಂಡಿದ್ದಾರೆ.

Young citizens on 5th at 5 PM for 5 minutes, beating thaali for jobs… 🙂

Posted by Rajiv Tyagi on Sunday, September 6, 2020

ಇತ್ತ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಖಾಸಗೀಕರಣದ ವಿರುದ್ಧ ಲಂಕಾ ಗೇಟ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಿರುದ್ಯೋಗ ಹೆಚ್ಚಾಗಲೂ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ಚಪ್ಪಾಳೆ ತಟ್ಟಿ, ತಟ್ಟೆಗಳನ್ನು ಬಡಿಯುವ ಮೂಲಕ ಪ್ರತಿರೋಧ ದಾಖಲಿಸಿದ್ದಾರೆ.

ಸಾಂಕ್ರಾಮಿಕ ರೋಗ ಮತ್ತು ನಿರುದ್ಯೋಗದಿಂದ ದೇಶದ ಕೋಟ್ಯಂತರ ಬಡಜನರು ತೊಂದರೆಗೀಡಾದಾಗ, ಕೇಂದ್ರ ಸರ್ಕಾರವು ತನ್ನ ಸಾರ್ವಜನಿಕ ಆಸ್ತಿಯನ್ನು ದೇಶದ ಕೆಲವು ದೊಡ್ಡ ಕೈಗಾರಿಕೋದ್ಯಮಿಗಳಿಗೆ ನಿರಂತರವಾಗಿ ಮಾರಾಟ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

PC: Joint Action Committee – BHU/ FACEBOOK

ಈ ಕುರಿತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಅವರ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿಎಸ್‌ಟಿ, ಮುಂದಾಲೋಚನೆಯಿಲ್ಲದ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಇದನ್ನು ಒಪ್ಪಿಕೊಂಡು ಸರಿಪಡಿಸಬೇಕಾದ ಸರ್ಕಾರ ಮತ್ತೆ ಜಾತಿ, ಧರ್ಮಗಳ ಹೆಸರಿನಲ್ಲಿ ಯುವ ಜನರನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿದೆ. ಆದರೆ ಯುವಜನರು ಇದರಿಂದ ರೋಸಿಹೋಗಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮೋದಿ ವಿಡಿಯೋಗಳಿಗೆ ಡಿಸ್‌ಲೈಕ್ ಒತ್ತುತ್ತಿದ್ದಾರೆ” ಎಂದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳದೇ, ವೈದ್ಯರು ಮತ್ತು ಇತರರಿಗೆ ಸಹಾಯ ಮಾಡದೇ ಕೇವಲ ತಟ್ಟೆ ಲೋಟ ಬಡಿಯಿರಿ ಎಂದರು ಪ್ರಧಾನಿ. ಆದರೆ ಕೊರೊನಾ ಜಾಸ್ತಿ ಆಗಿದೆ. ಅದೇ ರೀತಿ ನಾವು ತಟ್ಟೆ ಲೋಟ ಬಡಿಯುವುದರಿಂದ ಉದ್ಯೋಗ ಜಾಸ್ತಿಯಾಗುವುದಿಲ್ಲ ಬದಲಿಗೆ ಸರ್ಕಾರ ಇದರಿಂದ ಎಚ್ಚೆತ್ತುಕೊಳ್ಳಬೇಕು. ಆದರೆ ಅವೈಜ್ಞಾನಿಕವಾಗಿ ಚಿಂತಿಸುವ ಸರ್ಕಾರಕ್ಕೆ ಯುವಜನರು ತಟ್ಟೆ ಲೋಟ ಬಡಿಯುವ ಮೂಲಕ ಅವೈಜ್ಞಾನಿಕ ರೀತಿಯಲ್ಲಿ ಎದುರೇಟು ನೀಡುತ್ತಿದ್ದಾರೆ. ಈಗಲಾದರು ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಸರೋವರ್ ತಿಳಿಸಿದ್ದಾರೆ.

ಯುವಸಮೂಹ ಉದ್ಯೋಗಕ್ಕಾಗಿ ಪಟ್ಟುಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದಾರೆ. ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

ಯುವ ಸಮೂಹದ ಈ ಪ್ರಯತ್ನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಿನ ದಿನಕ್ಕೂ ನಿರುದ್ಯೋಗ ಹೆಚ್ಚಾಗುತ್ತಿದೆ. ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಭಟನೆ, ವಿಭಿನ್ನ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡರೂ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...