Homeಅಂತರಾಷ್ಟ್ರೀಯಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಕಳೆದ ವಾರ ದುರ್ಗಾ ಪೂಜೆಯ ಸಂದರ್ಭದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ವಿಧ್ವಂಸಕ ಘಟನೆಗಳ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ ನಡೆಸಿತ್ತು. ಇದರ ಬೆನ್ನಲ್ಲೇ ಹಿಂದೂಗಳಿಗೆ ಸೇರಿದ ಅರವತ್ತಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಜೊತೆಗೆ 29ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾ ರಾಜಧಾನಿ ಢಾಕಾದಿಂದ ಸುಮಾರು 255 ಕಿಮೀ ದೂರದಲ್ಲಿರುವ ಹಳ್ಳಿಯಲ್ಲಿ ಭಾನುವಾರ ತಡರಾತ್ರಿ ಬೆಂಕಿ ಹಚ್ಚಲಾಗಿದೆ ಎಂದು bdnews24.com ವರದಿ ಮಾಡಿದೆ.

ಉತ್ತರ ಜಿಲ್ಲೆಯ ಪಿರ್ಗಂಜ್ ಉಪಜಿಲಾದ ಮಾಝೀಪಾರ-ಬೊತ್ತಲ ಮತ್ತು ಹತಿಬಂಧ ಗ್ರಾಮದಲ್ಲಿ ಕನಿಷ್ಠ 20 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ದಾಳಿಕೋರರು ಸ್ಥಳೀಯ ಹಿಂದೂ ದೇವಸ್ಥಾನವನ್ನು ಧ್ವಂಸಗೊಳಿಸಿದ್ದಾರೆ.

ಹಳ್ಳಿಯ ಹಿಂದೂ ಯುವಕನೊಬ್ಬ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಧರ್ಮವನ್ನು ಅವಹೇಳನ ಮಾಡಿದ್ದಾರೆ” ಎಂಬ ವದಂತಿಯಿಂದಾಗಿ ಈ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಕಮರುಝಮಾನ್ (Mohammad Qamruzzaman) ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಆ ಯುವಕನ ಮನೆಯ ಸುತ್ತಲೂ ಪೊಲೀಸರು ಕಾವಲು ಕಾಯುತ್ತಿದ್ದಂತೆಯೇ ದಾಳಿಕೋರರು ಹತ್ತಿರದ ಇತರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿ ಹೇಳಿದೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ದಾಳಿಕೋರರು ಸ್ಥಳದಿಂದ ಹಣ ಮತ್ತು ಜಾನುವಾರುಗಳನ್ನು ಲೂಟಿ ಮಾಡಿದ್ದಾರೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಚಾಂದ್‌ಪುರ್ ಮತ್ತು ನೋಖಾಲಿಯಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಹಿಂದೂ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಆರೋಪಿಸಿದೆ.

ಇತ್ತಿಚೀನ ದಾಳಿಗಳಲ್ಲಿ ಹಿಂದೂ ಸಮುದಾಯದ 559 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಹಿಂದೂಗಳಿಗೆ ಸೇರಿದ 442 ಅಂಗಡಿ ಮುಂಗಟ್ಟುಗಳು ಲೂಟಿಯಾಗಿ ಧ್ವಂಸವಾಗಿವೆ ಎಂದು ವರದಿ ಹೇಳಿದೆ. ಇದೇ ಅವಧಿಯಲ್ಲಿ ಕನಿಷ್ಠ 1,678  ಹಿಂದೂ ದೇವಾಲಯಗಳು, ವಿಗ್ರಹಗಳು ಮತ್ತು ಪೂಜಾ ಸ್ಥಳಗಳ ಮೇಲೆ ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿವೆ ಎಂದು ಅದು ಹೇಳಿದೆ. ಈ ಘಟನೆಗಳಲ್ಲಿ ಹಿಂದೂ ಸಮುದಾಯದ 11 ನಾಗರಿಕರು ಸಾವನ್ನಪ್ಪಿದ್ದರೆ, 862 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಕಳೆದ ಗುರುವಾರ ದ್ವಾರಕೇಶ್ವರಿ ರಾಷ್ಟ್ರೀಯ ದೇವಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪ್ರಧಾನಿ ಶೇಖ್ ಹಸೀನಾ, “ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರನ್ನು, ದಾಳಿಗೆ ಸಂಬಂಧಿಸಿದ ಘಟನೆಗಳನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ. ಯಾರನ್ನೂ ಬಿಡುವುದಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ಅವರನ್ನು ಹುಡುಕಿ  ಶಿಕ್ಷಿಸಲಾಗುವುದು” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂಗಳಿಗೆ ಇದು ಎಚ್ಚರಿಕೆಯ ಘಂಟೆ. ಇಂದು ಬಂಗ್ಲಾದೇಶದಲ್ಲಿ ಮುಂದೊಂದು ದಿನ ಭಾರತದಲ್ಲಿ ಇದನ್ನು ತಪ್ಪಿಸಬೇಕಾದರೆ ಮೋದಿಜಿಯವರಂತಹ ನಾಯಕತ್ವ ಮುಂದುವರೆಯಲೇಬೇಕು.ಹಿಂದೂಗಳು ಒಗ್ಗಟ್ಟಾಗುವದು ಅವಶ್ಯವಾಗಿದೆ. ಇನ್ನಾದರೂ ಜಾತಿ,ಪಂಗಡ ಬಿಟ್ಟು ದೇಶದ ಭದ್ರತೆ ಹಾಗೂ ಮುಂದಿನ ನಮ್ಮ ಪೀಳಿಗೆಗಳ ಒಳಿತಿಗಾಗಿ ಮೋದಿಜಿಯವರ ಆಡಳಿತವನ್ನು ಮುಂದುವರೆಸಲು ಶ್ರಮಿಸುವ.
    . ಎಚ್ಚರ ಹಿಂದೂಗಳೇ ಎಚ್ಚರ !

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....