Homeಅಂತರಾಷ್ಟ್ರೀಯಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಬೇಡಿಕೆ: ಭಾರತ ಹೇಳಿದ್ದೇನು?

ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಬೇಡಿಕೆ: ಭಾರತ ಹೇಳಿದ್ದೇನು?

ಹಸೀನಾ ಭಾರತದಲ್ಲೇ ಇದ್ದಾರಾ?

- Advertisement -
- Advertisement -

ಮಾನವೀಯತೆಯ ವಿರುದ್ಧದ ಅಪರಾಧ ಪ್ರಕರಣದಲ್ಲಿ ಮಾಜಿ ಪ್ರಧಾನಿ (ಪದಚ್ಯುತ) ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಅವರಿಗೆ ಮರಣದಂಡನೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್ 17) ಆದೇಶಿಸಿದೆ.

ಶಿಕ್ಷೆ ಘೋಷಣೆಯಾದ ಬಳಿಕ ಹಸೀನಾ ಮತ್ತು ಅಸಾದುಝ್ಝಮಾನ್ ಅವರನ್ನು ಹಸ್ತಾಂತರಿಸುವಂತೆ ಅಥವಾ ಗಡಿಪಾರು ಮಾಡುವಂತೆ ಬಾಂಗ್ಲಾದೇಶ ಭಾರತದ ಬಳಿ ಬೇಡಿಕೆಯಿಟ್ಟಿದೆ. ಹಸೀನಾ ಭಾರತದಲ್ಲೇ ರಕ್ಷಣೆ ಪಡೆದಿದ್ದಾರೆ ಎನ್ನುವುದು ಬಾಂಗ್ಲಾದ ಬಲವಾದ ವಾದವಾಗಿದೆ. ಈ ಹಿಂದೆಯೂ ಬಾಂಗ್ಲಾ ಈ ಬೇಡಿಕೆಯನ್ನು ಭಾರತದ ಮುಂದಿಟ್ಟಿತ್ತು.

ಹಸೀನಾ ಅವರಿಗೆ ಶಿಕ್ಷೆ ಘೋಷಣೆಯಾದ ಬಳಿಕ, ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, “ಬಾಂಗ್ಲಾದೇಶದ ಢಾಕಾದಲ್ಲಿರುವ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ ನೀಡಿರುವ ತೀರ್ಪನ್ನು ಭಾರತ ಔಪಚಾರಿಕವಾಗಿ ಗಮನಿಸಿದೆ. ಭಾರತ ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ” ಎಂದು ಹೇಳಿದೆ.

ಮುಂದುವರಿದು, “ಭಾರತವು ಬಾಂಗ್ಲಾದೇಶದ ಒಳ್ಳೆಯ ಸ್ನೇಹಿತ ಮತ್ತು ನೆರೆಯ ದೇಶವಾಗಿ, ಅಲ್ಲಿನ ಜನರ ಒಳಿತಿಗಾಗಿ ಯಾವಾಗಲೂ ಕೆಲಸ ಮಾಡುತ್ತದೆ. ಬಾಂಗ್ಲಾದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ, ಎಲ್ಲರಿಗೂ ಸಮಾನ ಅವಕಾಶ ಮತ್ತು ಸ್ಥಿರತೆ ಇರುವಂತೆ ನೋಡಿಕೊಳ್ಳಲು ಭಾರತ ಬದ್ಧವಾಗಿದೆ. ಈ ಉದ್ದೇಶದಿಂದ ಯಾರೇ ಆ ದೇಶದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ಅವರೆಲ್ಲರೊಂದಿಗೂ ಒಳ್ಳೆಯ ರೀತಿಯಲ್ಲಿ ಸಹಕಾರ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದೆ.

ಭಾರತ-ಬಾಂಗ್ಲಾದೇಶ ನಡುವಿನ ಆರೋಪಿಗಳನ್ನು ಹಿಂದಿರುಗಿಸುವ ಒಪ್ಪಂದವನ್ನು (extradition treaty)ಉಲ್ಲೇಖಿಸಿರುವ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ, ಹಸೀನಾ ಮತ್ತು ಅಸಾದುಝ್ಝಮಾನ್ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಆಗ್ರಹಿಸಿದೆ.

“ಯಾವುದೇ ದೇಶ ಹಸೀನಾ ಅವರಿಗೆ ರಕ್ಷಣೆ ಒದಗಿಸಿದರೆ ಅದು ‘ಅತ್ಯಂತ ಸ್ನೇಹಪರವಲ್ಲದ ಕೃತ್ಯ ಮತ್ತು ನ್ಯಾಯದ ನಿರ್ಲಕ್ಷ್ಯ’ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಹೇಳಿದೆ. ಈ ಮೂಲಕ ಭಾರತದ ಮೇಲೆ ಪರೋಕ್ಷ ಒತ್ತಡ ಹಾಕಿದೆ.

ಈ ಹಿಂದೆ ಭಾರತದ ವಿದೇಶಾಂಗ ಕಾರ್ಯದರ್ಶಿ ಭೇಟಿ ನೀಡಿದ್ದ ಎರಡು ವಾರಗಳ ನಂತರ, ಅಂದರೆ 2024 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶವು ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಔಪಚಾರಿಕ ಮನವಿ ಮಾಡಿತ್ತು.

2013ರಲ್ಲಿ ಭಾರತ-ಬಾಂಗ್ಲಾದೇಶ ನಡುವೆ ಮಾಡಿಕೊಂಡಿರುವ ಆರೋಪಿಗಳ ಹಿಂದಿರುಗಿಸುವ ಒಪ್ಪಂದದ (extradition treaty)ಪ್ರಕಾರ, ಯಾವುದೇ ವ್ಯಕ್ತಿಯನ್ನು ಹಿಂದಿರುಗಿಸುವ ಬೇಡಿಕೆ ರಾಜಕೀಯ ಉದ್ದೇಶದಿಂದ (politically motivated)ಕೂಡಿದೆ ಎಂದು ತೋರಿದರೆ ಅದನ್ನು ತಿರಸ್ಕರಿಸಬಹುದು.

ಕಳೆದ ವರ್ಷ ದೇಶ ತೊರೆದು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎನ್ನಲಾದ ಶೇಖ್ ಹಸೀನಾ ಅವರು, “ನನ್ನ ಮೇಲಿನ ಎಲ್ಲಾ ಆರೋಪಗಳು ಸಂಪೂರ್ಣ ರಾಜಕೀಯ ದ್ವೇಷದಿಂದ ಕೂಡಿದೆ” ಎಂದು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ.

ಒಪ್ಪಂದದ ಅನುಚ್ಛೇದ 6ರ ಪ್ರಕಾರ, “ಹಸೀನಾ ಮೇಲಿನ ಆರೋಪ ಮತ್ತು ಘೋಷಣೆ ಮಾಡಿರುವ ಶಿಕ್ಷೆ ನಿಜವಾಗಿಯೂ ನ್ಯಾಯಯುತವಾಗಿದೆಯೇ, ಇಲ್ಲ ರಾಜಕೀಯ ದುರುದ್ದೇಶದಿಂದ ಕೂಡಿದೆಯೇ ಎಂದು ಭಾರತ ಪರೀಕ್ಷಿಸಬಹುದು.

ಹಸೀನಾ ಮೇಲಿನ ಆರೋಪ ಸತ್ಯ, ಒಳ್ಳೆಯ ಭಾವನೆ ಮತ್ತು ನಿಜವಾದ ನ್ಯಾಯದ ಹಿತಾಸಕ್ತಿಯಿಂದ ಕೂಡಿರದಿದ್ದರೆ ಭಾರತ ಹಸೀನಾ ಅವರನ್ನು ಹಸ್ತಾಂತರಿಸುವ ಬೇಡಿಕೆಯನ್ನು ತಿರಸ್ಕರಿಸಬಹುದು ಎಂದು ವರದಿಗಳು ಹೇಳಿವೆ.

ಹಸೀನಾ ಭಾರತದಲ್ಲೇ ಇರುವುದು ನಿಜಾನಾ?

ಕಳೆದ ವರ್ಷ (2024ರ ಆಗಸ್ಟ್‌ನಲ್ಲಿ) ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ಚಳವಳಿಯ ಗಲಭೆಯ ನಂತರ ಹಸೀನಾ ಅವರು ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ. ಈಗಲೂ (2025ರ ನವೆಂಬರ್ 18ರಂತೆ) ಅವರು ನವದೆಹಲಿಯಲ್ಲಿ ಭಾರೀ ಭದ್ರತೆಯೊಂದಿಗೆ ವಾಸಿಸುತ್ತಿದ್ದಾರೆ ಎಂದು ವಿವಿಧ ವರದಿಗಳು (ಉದಾ: ಇಂಡಿಯಾ ಟುಡೇ, ಝೀ ನ್ಯೂಸ್, ದಿ ಹಿಂದೂ, ಟೈಮ್ಸ್ ಆಫ್ ಇಂಡಿಯಾ) ದೃಢಪಡಿಸಿವೆ.

ಬಾಂಗ್ಲಾದೇಶದ ಸರ್ಕಾರ ಹಸೀನಾ ಅವರನ್ನು ತಮಗೆ ಹಸ್ತಾಂತರಿಸುವಂತೆ ಭಾರತಕ್ಕೆ ಬೇಡಿಕೆ ಇಟ್ಟಿದೆ. ಆದರೆ, ಭಾರತ ಇನ್ನೂ ಅವರನ್ನು ರಕ್ಷಿಸುತ್ತಿದೆ ಮತ್ತು ಯಾವುದೇ ಹಸ್ತಾಂತರ ನಿರ್ಧಾರ ತೆಗೆದುಕೊಂಡಿಲ್ಲ. ಹಸೀನಾ ಈಗ ಇರುವ ನಿಖರ ಸ್ಥಳವನ್ನು ಭಾರತ ಸರ್ಕಾರ ರಹಸ್ಯವಾಗಿಟ್ಟುಕೊಂಡಿದೆ. ಆದರೆ, ಅವರು ದೆಹಲಿಯ ಉನ್ನತ ಭದ್ರತಾ ಪ್ರದೇಶದಲ್ಲಿ (Lutyens’ Bungalow Zone) ಇದ್ದಾರೆ ಎಂದು ವರದಿಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...