Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...