Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...