Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...