Homeಅಂತರಾಷ್ಟ್ರೀಯಬಾಂಗ್ಲಾದೇಶ: ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಮುಂದಾದ ಸರ್ಕಾರ

ಬಾಂಗ್ಲಾದೇಶ: ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಮುಂದಾದ ಸರ್ಕಾರ

ಬಾಂಗ್ಲಾದೇಶದ ನೊಖಾಲಿ ಎಂಬಲ್ಲಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆ ಬೆಳಕಿಗೆ ಬಂದು, ದೇಶಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾದ ಹಿನ್ನೆಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

- Advertisement -
- Advertisement -

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಘಟನೆಗಳ ಬಗ್ಗೆ ದಕ್ಷಿಣ ಏಷ್ಯಾದ ದೇಶದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆಗೆ ಅವಕಾಶ ನೀಡುವ ತಿದ್ದುಪಡಿಯನ್ನು ಬಾಂಗ್ಲಾದೇಶ ಸರ್ಕಾರ ಅನುಮೋದಿಸಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಸಾಪ್ತಾಹಿಕ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದಬ್ಬಾಳಿಕೆ ತಡೆ ಕಾಯ್ದೆ-2000ಕ್ಕೆ ತಿದ್ದುಪಡಿಯನ್ನು ಅನುಮೋದಿಸಲಾಗಿದೆ ಎಂದು ಕ್ಯಾಬಿನೆಟ್ ಕಾರ್ಯದರ್ಶಿ ಖಾಂಡ್ಕರ್ ಅನ್ವರುಲ್ ಇಸ್ಲಾಂ ತಿಳಿಸಿದ್ದಾರೆ.

ಈ ಮೂಲಕ ಬಾಂಗ್ಲಾದೇಶದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ವಿಧಿಸಲಾಗುತ್ತಿದ್ದ ಜೀವಾವಧಿ ಶಿಕ್ಷೆಗೆ ತಿದ್ದುಪಡಿ ಬರಲಿದ್ದು, ಇನ್ನು ಮುಂದೆ ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸದ್ಯ ಸರ್ಕಾರದ ಈ ಹೊಸ ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ ಸಿಗಬೇಕಿದೆ. ಅ.13 ರಂದು ರಾಷ್ಟ್ರಪತಿಗಳು ಅನುಮೋದನೆ ನೀಡುವ ನಿರೀಕ್ಷೆ ಇದೆ. ಬಳಿಕ ಹೊಸ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಿದ್ದೇವೆ ಎಂದು ಬಾಂಗ್ಲಾದ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಿಸುಲ್​ ಹುಕ್​ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಬಾಂಗ್ಲಾದೇಶದ ನೊಖಾಲಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಕ್ಟೋಬರ್ 4 ರಂದು ಹಲ್ಲೆಯ ವಿಡಿಯೋ ವೈರಲ್ ಆಗಿದ್ದರಿಂದ ಈ ಘಟನೆ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಪೊಲೀಸರು ಎಂಟು ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ಘಟನೆಯನ್ನು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯದ ವಿರುದ್ಧ ಬಾಂಗ್ಲಾದೇಶ ಇಂತಹ ದೊಡ್ಡ ಪ್ರಮಾಣದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದ್ದು ಇದೇ ಮೊದಲು.

ಐನ್ ಓ ಸಲೀಶ್ ಕೇಂದ್ರ (Ain o Salish Kendra) ಎಂಬ ಮಾನವ ಹಕ್ಕುಗಳ ಗುಂಪು ಹೇಳುವಂತೆ ಈ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಸುಮಾರು 1,000 ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ. ಅವರಲ್ಲಿ ಐದನೇ ಒಂದು ಭಾಗ ಸಾಮೂಹಿಕ ಅತ್ಯಾಚಾರಗಳು. 975 ಅತ್ಯಾಚಾರ ಸಂತ್ರಸ್ತರಲ್ಲಿ 43 ಮಂದಿ ಹಲ್ಲೆಗೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದೆ.

ಇದನ್ನೂ ಓದಿ: ಕೇವಲ ಕ್ಯಾಂಡಲ್‌ ಸುಡುವುದಲ್ಲ, ಅತ್ಯಾಚಾರಿಗಳನ್ನೂ ಸುಡುವುದಲ್ಲ: ಸುಡಬೇಕಾದ್ದು…

ಇನ್ನೊಂದೆಡೆ ಪ್ರಗತಿಪರರು ಮತ್ತು ಹಲವು ಮಹಿಳಾ ಸಂಘಟನೆಗಳು ಅತ್ಯಾಚಾರಕ್ಕೆ ಮರಣದಂಡೆನೆ ಪರಿಹಾರವಲ್ಲ ಎಂದು ವಾದಿಸುತ್ತಿವೆ. “ಕೇವಲ ವಿಕೃತ ಲೈಂಗಿಕತೆಯನ್ನು ಮಾರುತ್ತಿರುವ ಕಂಪೆನಿಗಳಿರುವಾಗ ವ್ಯಕ್ತಿಗಳನ್ನಷ್ಟೇ ಮರಣದಂಡನೆಗೆ ದೂಡುವುದು ಪರಿಹಾರವಲ್ಲ ಎಂಬುದು ಮಾತ್ರವಲ್ಲ; ಬದಲಿಗೆ ಅಂತಹ ಶಿಕ್ಷೆ ಕೊಡುವ ದೇಶಗಳಲ್ಲೂ ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ಹಿಂಸಾಚಾರಗಳು ಹಲವು ವಿಕೃತ ರೂಪಗಳಲ್ಲಿ ಇಂದಿಗೂ ಚಾಲ್ತಿಯಲ್ಲಿವೆ” ಎಂಬುದು ಅವರ ವಾದ.


ಇದನ್ನೂ ಓದಿ: ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...