Homeಅಂತರಾಷ್ಟ್ರೀಯಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಉಪಜಿಲ್ಲಾದ ಚಕ್ಗೋರಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಈ ಘಟನೆಯಲ್ಲಿ ಮಿಥುನ್ ಸರ್ಕಾರ್ ಎಂದು ಗುರುತಿಸಲಾದ ಯುವಕ ಸಾವನ್ನಪ್ಪಿದ್ದಾನೆ.

ಸ್ಥಳೀಯ ನಿವಾಸಿಗಳು ಮತ್ತು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಬಾಂಗ್ಲಾದೇಶದ ಬಂಗಾಳಿ ದಿನಪತ್ರಿಕೆ ಮನೋಬ್ಕಾಂತ ಪ್ರಕಾರ, ಸ್ಥಳೀಯ ಗುಂಪೊಂದು ದರೋಡೆಕೋರನೆಂದು ಶಂಕಿಸಿ ಮಿಥುನ್ ಅವರನ್ನು ಬೆನ್ನಟ್ಟಿತು. ತನ್ನನ್ನು ತಾನು ಉಳಿಸಿಕೊಳ್ಳುವ ಹತಾಶ ಪ್ರಯತ್ನದಲ್ಲಿ, ಅವನು ಹತ್ತಿರದ ಆಳವಾದ ಕಾಲುವೆಗೆ ಹಾರಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಮೊಹದೇವ್‌ಪುರ ಪೊಲೀಸ್ ಠಾಣೆ, ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಹಲವಾರು ಗಂಟೆಗಳ ಹುಡುಕಾಟದ ನಂತರ, ಅಗ್ನಿಶಾಮಕ ಸೇವೆಯ ಡೈವಿಂಗ್ ತಂಡವು ಮಿಥುನ್ ಅವರ ಶವವನ್ನು ಕಾಲುವೆಯಿಂದ ಹೊರತೆಗೆದರು.

ಈ ಘಟನೆಯನ್ನು ದೃಢಪಡಿಸಿದ ಮೊಹದೇವ್‌ಪುರ ಪೊಲೀಸ್ ಠಾಣಾಧಿಕಾರಿ (ಒಸಿ) ಶಾಹಿದುಲ್ ಇಸ್ಲಾಂ, ದರೋಡೆ ಆರೋಪದ ಮೇಲೆ ಯುವಕನನ್ನು ಬೆನ್ನಟ್ಟುವಾಗ ಕಾಲುವೆಗೆ ಹಾರಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಹೇಳಿದರು. ಅಗ್ನಿಶಾಮಕ ದಳದ ಸಹಾಯದಿಂದ ಶವವನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುದ್ದು, ಶವಪರೀಕ್ಷೆಯ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಘಟನೆಯು ಕಳೆದ 19 ದಿನಗಳಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ಏಳನೇ ಪ್ರಕರಣ ಮತ್ತು ಈ ವಾರದ ಮೂರನೇ ಘಟನೆಯಾಗಿದೆ.

ಸೋಮವಾರ, 24 ಗಂಟೆಗಳ ಅವಧಿಯಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹಿಂದೂ ಧರ್ಮಕ್ಕೆ ಸೇರಿದ ಇಬ್ಬರು ಸಾವನ್ನಪ್ಪಿದ್ದಾರೆ. ಮೊದಲ ಪ್ರಕರಣದಲ್ಲಿ, ಢಾಕಾ ಬಳಿಯ ನರಸಿಂಗ್ಡಿ ಜಿಲ್ಲೆಯಲ್ಲಿ 40 ವರ್ಷದ ಶರತ್ ಚಕ್ರವರ್ತಿ ಮಣಿಯ ಮೇಲೆ ತೀಕ್ಷ್ಣವಾದ ಆಯುಧಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಎರಡನೇ ಘಟನೆಯಲ್ಲಿ, ಜಶೋರ್ ಜಿಲ್ಲೆಯ ಮೋನಿರಾಂಪುರ ಉಪಜಿಲ್ಲಾದಲ್ಲಿ 38 ವರ್ಷದ ಹಿಂದೂ ಉದ್ಯಮಿ ರಾಣಾ ಪ್ರತಾಪ್ ಬೈರಾಗಿ ಅವರನ್ನು ಸಾರ್ವಜನಿಕವಾಗಿ ಗುಂಡು ಹಾರಿಸಲಾಯಿತು.

ಕಳೆದ ಶನಿವಾರ, ಶರಿಯತ್‌ಪುರ ಜಿಲ್ಲೆಯ ದಮುದ್ಯಾ ಉಪಜಿಲ್ಲಾದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ಕ್ರೂರವಾಗಿ ಹಲ್ಲೆಗೊಳಗಾದ ಖೋಕೋನ್ ಚಂದ್ರ ದಾಸ್ ಎಂಬ ಮತ್ತೊಬ್ಬ ಹಿಂದೂ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಕಳೆದ ವಾರ, ಮೈಮೆನ್‌ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲ್ಲಾದಲ್ಲಿ 40 ವರ್ಷದ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ.

ಡಿಸೆಂಬರ್ 24 ರಂದು, ಬಾಂಗ್ಲಾದೇಶದ ಮಾಧ್ಯಮಗಳು 29 ವರ್ಷದ ಹಿಂದೂ ಯುವಕ ಅಮೃತ್ ಮೊಂಡಲ್ ಅವರನ್ನು ಕಲಿಮೋಹರ್ ಒಕ್ಕೂಟದ ಹೊಸೈನ್‌ಡಂಗಾ ಪ್ರದೇಶದಲ್ಲಿ ಗುಂಪೊಂದು ಹತ್ಯೆ ಮಾಡಿದೆ ಎಂದು ಹೇಳಲಾದ ವರದಿಯಾಗಿದೆ.

ಇದಲ್ಲದೆ, ಡಿಸೆಂಬರ್ 18 ರಂದು, ಮೈಮೆನ್‌ಸಿಂಗ್‌ನ ಭಾಲುಕಾ ಉಪಜಿಲ್ಲಾದಲ್ಲಿರುವ ತನ್ನ ಕಾರ್ಖಾನೆಯಲ್ಲಿ ಮುಸ್ಲಿಂ ಸಹೋದ್ಯೋಗಿಯೊಬ್ಬರು ಸುಳ್ಳು ಧರ್ಮನಿಂದೆಯ ಆರೋಪ ಹೊರಿಸಿದ ನಂತರ, ಗುಂಪು ಹಲ್ಲೆ ಘಟನೆಯಲ್ಲಿ 25 ವರ್ಷದ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರನ್ನು ಕ್ರೂರವಾಗಿ ಕೊಲ್ಲಲಾಯಿತು. ಅವರನ್ನು ಕೊಂದ ನಂತರ, ಗುಂಪೊಂದು ಅವರ ದೇಹವನ್ನು ಮರಕ್ಕೆ ನೇತುಹಾಕಿ ಬೆಂಕಿ ಹಚ್ಚಿದೆ ಎಂದು ವರದಿಯಾಗಿದೆ.

ಬಾಂಗ್ಲಾದೇಶವು ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದಲ್ಲಿ ತೀವ್ರ ಏರಿಕೆಯನ್ನು ಕಂಡಿದೆ. ಇದು ನಾಗರಿಕರಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಹಲವಾರು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳಿಂದ ಖಂಡನೆಗೆ ಗುರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...