Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...