Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...