Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...