Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...