Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...