Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...