Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...