Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...