Homeಮುಖಪುಟಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

1971 ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ಗೆದ್ದ ನಂತರ ಬಾಂಗ್ಲಾದೇಶ ರಚನೆಗೆ ಕಾರಣವಾದ ಪರಿಸ್ಥಿತಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ತಪ್ಪಾಗಿ ನಿರ್ವಹಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. ಬಾಂಗ್ಲಾ ವಿಮೋಚನೆಯನ್ನು ಒಂದು ತಂತ್ರಗತ ವಿಜಯವೆಂದು ಕರೆದರೂ, ರಾಜತಾಂತ್ರಿಕ ವೈಫಲ್ಯವೆಂದು ಅವರು ವಿಮರ್ಶಿಸಿದ್ದಾರೆ. ಬಾಂಗ್ಲಾದೇಶ ವಿಮೋಚನೆಯನ್ನು

“ಇಂದಿರಾ ಗಾಂಧಿ ಇಂದು ಜೀವಂತವಾಗಿದ್ದರೆ, ನಮ್ಮ ಸಶಸ್ತ್ರ ಪಡೆಗಳು ಗೆದ್ದ ನಿರ್ಣಾಯಕ ವಿಜಯವನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ರಾಷ್ಟ್ರವು ಅವರನ್ನು ಪ್ರಶ್ನಿಸುತ್ತಿತ್ತು. ಬಾಂಗ್ಲಾದೇಶದ ರಚನೆಯು ಚೌಕಾಶಿಯಾಗಿರಲಿಲ್ಲ – ಅದು ಕಳೆದುಹೋದ ಐತಿಹಾಸಿಕ ಅವಕಾಶ.” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಸ್ತುತ ಉದ್ವಿಗ್ನತೆ ಮತ್ತು ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ಎರಡು ದೇಶಗಳ ನಡುವೆ ಕದನ ವಿರಾಮದ ಹಿನ್ನೆಲೆಯಲ್ಲಿ 1971 ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರ ನಿಲುವನ್ನು ಹಲವಾರು ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಇದರ ನಂತರ ಸಿಎಂ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಹಿಮಂತ ಬಿಸ್ವಾ ಸರ್ಮಾ ಅವರ ಈ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಸೃಷ್ಟಿ: ಒಂದು ತಂತ್ರಗತ ವಿಜಯ, ಆದರೆ ರಾಜತಾಂತ್ರಿಕ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. “1971ರ ಯುದ್ಧದಲ್ಲಿ ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರಿಂದ ಪಾಕಿಸ್ತಾನ ಎರಡು ಭಾಗವಾಗಿ ವಿಭಜನೆಗೊಂಡು ಬಾಂಗ್ಲಾದೇಶ ಸೃಷ್ಟಿಯಾಯಿತು. ಆದರೆ, ಈ ಗೆಲುವಿನ ಹೊರತಾಗಿಯೂ ಭಾರತದ ರಾಜಕೀಯ ನಾಯಕತ್ವವು ದೀರ್ಘಕಾಲೀನ ತಂತ್ರಗತ ಲಾಭಗಳನ್ನು ಪಡೆಯುವಲ್ಲಿ ವಿಫಲವಾಯಿತು.” ಎಂದು ಅವರು ಹೇಳಿದ್ದಾರೆ.

“ಭಾರತವು ವಿಮೋಚನೆಯ ಸಮಯದಲ್ಲಿ ಜಾತ್ಯತೀತ ಬಾಂಗ್ಲಾದೇಶವನ್ನು ಬೆಂಬಲಿಸಿದ್ದರೂ, 1988ರ ವೇಳೆಗೆ ಬಾಂಗ್ಲಾದೇಶವು ಇಸ್ಲಾಂ ಅನ್ನು ರಾಷ್ಟ್ರಧರ್ಮವನ್ನಾಗಿ ಘೋಷಿಸಿತು. ಇಂದು ಢಾಕಾದಲ್ಲಿ ರಾಜಕೀಯ ಇಸ್ಲಾಂ ಪ್ರಬಲವಾಗಿದೆ, ಇದು ಭಾರತ ಹೋರಾಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಹಿಂದೂ ಜನಸಂಖ್ಯೆ ಒಮ್ಮೆ 20% ಇತ್ತು, ಆದರೆ ಈಗ ಅದು 8%ಕ್ಕಿಂತ ಕಡಿಮೆಯಾಗಿದೆ. ವ್ಯವಸ್ಥಿತ ತಾರತಮ್ಯ ಮತ್ತು ಹಿಂಸೆಯಿಂದ ಹಿಂದೂಗಳು ತೊಂದರೆ ಅನುಭವಿಸುತ್ತಿದ್ದಾರೆ, ಆದರೆ ಭಾರತ ಈ ವಿಷಯದಲ್ಲಿ ಹೆಚ್ಚಾಗಿ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಯುದ್ಧದಲ್ಲಿ ಭಾರತ ಪ್ರಾಬಲ್ಯ ಹೊಂದಿದ್ದರೂ, ಸಿಲಿಗುರಿ ಕಾರಿಡಾರ್ (ಚಿಕನ್‌ನ ನೆಕ್) ಎಂಬ ಈ ಪ್ರದೇಶದ ದುರ್ಬಲತೆಯನ್ನು ಪರಿಹರಿಸಲು ಭಾರತ ವಿಫಲವಾಯಿತು. ಉತ್ತರ ಬಾಂಗ್ಲಾದೇಶದ ಮೂಲಕ ಸುರಕ್ಷಿತ ಭೂ ಮಾರ್ಗವನ್ನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ಲ, ಇದರಿಂದ ಈಶಾನ್ಯ ರಾಜ್ಯಗಳ ಸಂಪರ್ಕ ಸಮಸ್ಯೆ ಉಳಿದಿದೆ.” ಎಂದು ಅವರು ಹೇಳಿದ್ದಾರೆ.

“ಅಕ್ರಮ ಬಾಂಗ್ಲಾದೇಶಿ ವಲಸಿಗರ ಮರಳಿ ಕಳುಹಿಸುವ ಯಾವುದೇ ಒಪ್ಪಂದವನ್ನು ಮಾಡಲಾಗಿಲ್ಲ. ಇದರಿಂದ ಅಸ್ಸಾಂ, ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜನಸಂಖ್ಯಾಶಾಸ್ತ್ರೀಯ ಬದಲಾವಣೆ ಉಂಟಾಗಿ ಸಾಮಾಜಿಕ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ. ಜೊತೆಗೆ, ಭಾರತವು ಚಿತ್ತಗಾಂಗ್ ಬಂದರಿಗೆ ಪ್ರವೇಶವನ್ನು ಪಡೆಯಲು ವಿಫಲವಾಯಿತು. ಐವತ್ತು ವರ್ಷಗಳ ನಂತರವೂ ಈಶಾನ್ಯ ರಾಜ್ಯಗಳು ಭೂಪರಿವೃತವಾಗಿಯೇ ಉಳಿದಿವೆ, ಇದು ಆರ್ಥಿಕ ಅಭಿವೃದ್ಧಿಗೆ ತೊಡಕಾಗಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ದಶಕಗಳವರೆಗೆ ಭಾರತ ವಿರೋಧಿ ಉಗ್ರಗಾಮಿ ಗುಂಪುಗಳಿಗೆ ಆಶ್ರಯವಾಗಿತ್ತು, ಇದು 1971ರಲ್ಲಿ ಭಾರತ ಮಾಡಬೇಕಿದ್ದ ತಂತ್ರಗತ ಕ್ರಮಗಳ ಕೊರತೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

1971 ರ ಭಾರತ-ಪಾಕಿಸ್ತಾನ ಯುದ್ಧವನ್ನು ಬಾಂಗ್ಲಾದೇಶ ವಿಮೋಚನಾ ಯುದ್ಧ ಎಂದೂ ಕರೆಯುತ್ತಾರೆ. ಇದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್‌ ಸರ್ಕಾರದ ವಿರುದ್ಧ ನಡೆದ ದಂಗೆಯಿಂದ ಪ್ರಾರಂಭವಾಯಿತು. ಆ ವರ್ಷದ ಮಾರ್ಚ್‌ನಿಂದ, ಬಂಗಾಳಿ ರಾಷ್ಟ್ರೀಯವಾದಿಗಳು ಬಂಗಾಳಿ ಜನಸಂಖ್ಯೆಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಮೇಲೆ ಪಾಕಿಸ್ತಾನಿ ಪಡೆಗಳು ಕ್ರೂರವಾಗಿ ದಮನ ಮಾಡುತ್ತಿತ್ತು.

ಆಗಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ಪರವಾಗಿ ತಿಂಗಳುಗಟ್ಟಲೆ ಬೆಂಬಲ ನೀಡಿದ್ದರು. ಅದಾಗ್ಯೂ, ಭಾರತೀಯ ಸೇನೆಯು ಡಿಸೆಂಬರ್ 3, 1971 ರಂದು ಪಾಕಿಸ್ತಾನದೊಂದಿಗೆ ಪೂರ್ಣ ಪ್ರಮಾಣದ ಯುದ್ಧದಲ್ಲಿ ಔಪಚಾರಿಕವಾಗಿ ತೊಡಗಿತು.

ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಮತ್ತು ಅವರ ಸೈನಿಕರು ಢಾಕಾದಲ್ಲಿ ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿಯನ್ನು ಒಳಗೊಂಡ ಮಿತ್ರಪಕ್ಷಗಳಿಗೆ ಶರಣಾದರು. ಬಾಂಗ್ಲಾದೇಶದಲ್ಲಿ ಈ ದಿನವನ್ನು ‘ಬಿಜಯ್ ದಿಬೋಷ್’ ಎಂದು ಆಚರಿಸಲಾಗುತ್ತದೆ ಮತ್ತು ಪಾಕಿಸ್ತಾನದಿಂದ ಔಪಚಾರಿಕ ಸ್ವಾತಂತ್ರ್ಯ ಪಡೆದ ದಿನ ಎಂದು ಆಚರಿಸುತ್ತದೆ.

ಭಾರತ ಮತ್ತು ಪಾಕಿಸ್ತಾನ ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ನಿರ್ಧರಿಸಿದ ಮೇ 10ರ ಕದನ ವಿರಾಮದ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು 1971 ರ ಯುದ್ಧದ ಸಮಯದಲ್ಲಿ ಅಮೆರಿಕದ ಒತ್ತಡಕ್ಕೆ ಇಂದಿರಾ ಗಾಂಧಿ ಮಣಿಯದಿರುವ ಬಗ್ಗೆ ನೆನಪಿಸಿದ್ದರು. ಇದರ ನಂತರ, ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ, “ಇಂದಿರಾ ಗಾಂಧಿ – ಧೈರ್ಯ | ಮನವರಿಕೆ | ಬಲ” ಎಂಬ ಶೀರ್ಷಿಕೆಯನ್ನು ನೀಡಿತ್ತು. ಬಾಂಗ್ಲಾದೇಶ ವಿಮೋಚನೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...