Homeಮುಖಪುಟಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

1971 ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ಗೆದ್ದ ನಂತರ ಬಾಂಗ್ಲಾದೇಶ ರಚನೆಗೆ ಕಾರಣವಾದ ಪರಿಸ್ಥಿತಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ತಪ್ಪಾಗಿ ನಿರ್ವಹಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. ಬಾಂಗ್ಲಾ ವಿಮೋಚನೆಯನ್ನು ಒಂದು ತಂತ್ರಗತ ವಿಜಯವೆಂದು ಕರೆದರೂ, ರಾಜತಾಂತ್ರಿಕ ವೈಫಲ್ಯವೆಂದು ಅವರು ವಿಮರ್ಶಿಸಿದ್ದಾರೆ. ಬಾಂಗ್ಲಾದೇಶ ವಿಮೋಚನೆಯನ್ನು

“ಇಂದಿರಾ ಗಾಂಧಿ ಇಂದು ಜೀವಂತವಾಗಿದ್ದರೆ, ನಮ್ಮ ಸಶಸ್ತ್ರ ಪಡೆಗಳು ಗೆದ್ದ ನಿರ್ಣಾಯಕ ವಿಜಯವನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ರಾಷ್ಟ್ರವು ಅವರನ್ನು ಪ್ರಶ್ನಿಸುತ್ತಿತ್ತು. ಬಾಂಗ್ಲಾದೇಶದ ರಚನೆಯು ಚೌಕಾಶಿಯಾಗಿರಲಿಲ್ಲ – ಅದು ಕಳೆದುಹೋದ ಐತಿಹಾಸಿಕ ಅವಕಾಶ.” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಸ್ತುತ ಉದ್ವಿಗ್ನತೆ ಮತ್ತು ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ಎರಡು ದೇಶಗಳ ನಡುವೆ ಕದನ ವಿರಾಮದ ಹಿನ್ನೆಲೆಯಲ್ಲಿ 1971 ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರ ನಿಲುವನ್ನು ಹಲವಾರು ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಇದರ ನಂತರ ಸಿಎಂ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಹಿಮಂತ ಬಿಸ್ವಾ ಸರ್ಮಾ ಅವರ ಈ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಸೃಷ್ಟಿ: ಒಂದು ತಂತ್ರಗತ ವಿಜಯ, ಆದರೆ ರಾಜತಾಂತ್ರಿಕ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. “1971ರ ಯುದ್ಧದಲ್ಲಿ ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರಿಂದ ಪಾಕಿಸ್ತಾನ ಎರಡು ಭಾಗವಾಗಿ ವಿಭಜನೆಗೊಂಡು ಬಾಂಗ್ಲಾದೇಶ ಸೃಷ್ಟಿಯಾಯಿತು. ಆದರೆ, ಈ ಗೆಲುವಿನ ಹೊರತಾಗಿಯೂ ಭಾರತದ ರಾಜಕೀಯ ನಾಯಕತ್ವವು ದೀರ್ಘಕಾಲೀನ ತಂತ್ರಗತ ಲಾಭಗಳನ್ನು ಪಡೆಯುವಲ್ಲಿ ವಿಫಲವಾಯಿತು.” ಎಂದು ಅವರು ಹೇಳಿದ್ದಾರೆ.

“ಭಾರತವು ವಿಮೋಚನೆಯ ಸಮಯದಲ್ಲಿ ಜಾತ್ಯತೀತ ಬಾಂಗ್ಲಾದೇಶವನ್ನು ಬೆಂಬಲಿಸಿದ್ದರೂ, 1988ರ ವೇಳೆಗೆ ಬಾಂಗ್ಲಾದೇಶವು ಇಸ್ಲಾಂ ಅನ್ನು ರಾಷ್ಟ್ರಧರ್ಮವನ್ನಾಗಿ ಘೋಷಿಸಿತು. ಇಂದು ಢಾಕಾದಲ್ಲಿ ರಾಜಕೀಯ ಇಸ್ಲಾಂ ಪ್ರಬಲವಾಗಿದೆ, ಇದು ಭಾರತ ಹೋರಾಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಹಿಂದೂ ಜನಸಂಖ್ಯೆ ಒಮ್ಮೆ 20% ಇತ್ತು, ಆದರೆ ಈಗ ಅದು 8%ಕ್ಕಿಂತ ಕಡಿಮೆಯಾಗಿದೆ. ವ್ಯವಸ್ಥಿತ ತಾರತಮ್ಯ ಮತ್ತು ಹಿಂಸೆಯಿಂದ ಹಿಂದೂಗಳು ತೊಂದರೆ ಅನುಭವಿಸುತ್ತಿದ್ದಾರೆ, ಆದರೆ ಭಾರತ ಈ ವಿಷಯದಲ್ಲಿ ಹೆಚ್ಚಾಗಿ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಯುದ್ಧದಲ್ಲಿ ಭಾರತ ಪ್ರಾಬಲ್ಯ ಹೊಂದಿದ್ದರೂ, ಸಿಲಿಗುರಿ ಕಾರಿಡಾರ್ (ಚಿಕನ್‌ನ ನೆಕ್) ಎಂಬ ಈ ಪ್ರದೇಶದ ದುರ್ಬಲತೆಯನ್ನು ಪರಿಹರಿಸಲು ಭಾರತ ವಿಫಲವಾಯಿತು. ಉತ್ತರ ಬಾಂಗ್ಲಾದೇಶದ ಮೂಲಕ ಸುರಕ್ಷಿತ ಭೂ ಮಾರ್ಗವನ್ನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ಲ, ಇದರಿಂದ ಈಶಾನ್ಯ ರಾಜ್ಯಗಳ ಸಂಪರ್ಕ ಸಮಸ್ಯೆ ಉಳಿದಿದೆ.” ಎಂದು ಅವರು ಹೇಳಿದ್ದಾರೆ.

“ಅಕ್ರಮ ಬಾಂಗ್ಲಾದೇಶಿ ವಲಸಿಗರ ಮರಳಿ ಕಳುಹಿಸುವ ಯಾವುದೇ ಒಪ್ಪಂದವನ್ನು ಮಾಡಲಾಗಿಲ್ಲ. ಇದರಿಂದ ಅಸ್ಸಾಂ, ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜನಸಂಖ್ಯಾಶಾಸ್ತ್ರೀಯ ಬದಲಾವಣೆ ಉಂಟಾಗಿ ಸಾಮಾಜಿಕ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ. ಜೊತೆಗೆ, ಭಾರತವು ಚಿತ್ತಗಾಂಗ್ ಬಂದರಿಗೆ ಪ್ರವೇಶವನ್ನು ಪಡೆಯಲು ವಿಫಲವಾಯಿತು. ಐವತ್ತು ವರ್ಷಗಳ ನಂತರವೂ ಈಶಾನ್ಯ ರಾಜ್ಯಗಳು ಭೂಪರಿವೃತವಾಗಿಯೇ ಉಳಿದಿವೆ, ಇದು ಆರ್ಥಿಕ ಅಭಿವೃದ್ಧಿಗೆ ತೊಡಕಾಗಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ದಶಕಗಳವರೆಗೆ ಭಾರತ ವಿರೋಧಿ ಉಗ್ರಗಾಮಿ ಗುಂಪುಗಳಿಗೆ ಆಶ್ರಯವಾಗಿತ್ತು, ಇದು 1971ರಲ್ಲಿ ಭಾರತ ಮಾಡಬೇಕಿದ್ದ ತಂತ್ರಗತ ಕ್ರಮಗಳ ಕೊರತೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

1971 ರ ಭಾರತ-ಪಾಕಿಸ್ತಾನ ಯುದ್ಧವನ್ನು ಬಾಂಗ್ಲಾದೇಶ ವಿಮೋಚನಾ ಯುದ್ಧ ಎಂದೂ ಕರೆಯುತ್ತಾರೆ. ಇದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್‌ ಸರ್ಕಾರದ ವಿರುದ್ಧ ನಡೆದ ದಂಗೆಯಿಂದ ಪ್ರಾರಂಭವಾಯಿತು. ಆ ವರ್ಷದ ಮಾರ್ಚ್‌ನಿಂದ, ಬಂಗಾಳಿ ರಾಷ್ಟ್ರೀಯವಾದಿಗಳು ಬಂಗಾಳಿ ಜನಸಂಖ್ಯೆಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಮೇಲೆ ಪಾಕಿಸ್ತಾನಿ ಪಡೆಗಳು ಕ್ರೂರವಾಗಿ ದಮನ ಮಾಡುತ್ತಿತ್ತು.

ಆಗಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ಪರವಾಗಿ ತಿಂಗಳುಗಟ್ಟಲೆ ಬೆಂಬಲ ನೀಡಿದ್ದರು. ಅದಾಗ್ಯೂ, ಭಾರತೀಯ ಸೇನೆಯು ಡಿಸೆಂಬರ್ 3, 1971 ರಂದು ಪಾಕಿಸ್ತಾನದೊಂದಿಗೆ ಪೂರ್ಣ ಪ್ರಮಾಣದ ಯುದ್ಧದಲ್ಲಿ ಔಪಚಾರಿಕವಾಗಿ ತೊಡಗಿತು.

ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಮತ್ತು ಅವರ ಸೈನಿಕರು ಢಾಕಾದಲ್ಲಿ ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿಯನ್ನು ಒಳಗೊಂಡ ಮಿತ್ರಪಕ್ಷಗಳಿಗೆ ಶರಣಾದರು. ಬಾಂಗ್ಲಾದೇಶದಲ್ಲಿ ಈ ದಿನವನ್ನು ‘ಬಿಜಯ್ ದಿಬೋಷ್’ ಎಂದು ಆಚರಿಸಲಾಗುತ್ತದೆ ಮತ್ತು ಪಾಕಿಸ್ತಾನದಿಂದ ಔಪಚಾರಿಕ ಸ್ವಾತಂತ್ರ್ಯ ಪಡೆದ ದಿನ ಎಂದು ಆಚರಿಸುತ್ತದೆ.

ಭಾರತ ಮತ್ತು ಪಾಕಿಸ್ತಾನ ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ನಿರ್ಧರಿಸಿದ ಮೇ 10ರ ಕದನ ವಿರಾಮದ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು 1971 ರ ಯುದ್ಧದ ಸಮಯದಲ್ಲಿ ಅಮೆರಿಕದ ಒತ್ತಡಕ್ಕೆ ಇಂದಿರಾ ಗಾಂಧಿ ಮಣಿಯದಿರುವ ಬಗ್ಗೆ ನೆನಪಿಸಿದ್ದರು. ಇದರ ನಂತರ, ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ, “ಇಂದಿರಾ ಗಾಂಧಿ – ಧೈರ್ಯ | ಮನವರಿಕೆ | ಬಲ” ಎಂಬ ಶೀರ್ಷಿಕೆಯನ್ನು ನೀಡಿತ್ತು. ಬಾಂಗ್ಲಾದೇಶ ವಿಮೋಚನೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...