Homeಮುಖಪುಟಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

1971 ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ಗೆದ್ದ ನಂತರ ಬಾಂಗ್ಲಾದೇಶ ರಚನೆಗೆ ಕಾರಣವಾದ ಪರಿಸ್ಥಿತಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ತಪ್ಪಾಗಿ ನಿರ್ವಹಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. ಬಾಂಗ್ಲಾ ವಿಮೋಚನೆಯನ್ನು ಒಂದು ತಂತ್ರಗತ ವಿಜಯವೆಂದು ಕರೆದರೂ, ರಾಜತಾಂತ್ರಿಕ ವೈಫಲ್ಯವೆಂದು ಅವರು ವಿಮರ್ಶಿಸಿದ್ದಾರೆ. ಬಾಂಗ್ಲಾದೇಶ ವಿಮೋಚನೆಯನ್ನು

“ಇಂದಿರಾ ಗಾಂಧಿ ಇಂದು ಜೀವಂತವಾಗಿದ್ದರೆ, ನಮ್ಮ ಸಶಸ್ತ್ರ ಪಡೆಗಳು ಗೆದ್ದ ನಿರ್ಣಾಯಕ ವಿಜಯವನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ರಾಷ್ಟ್ರವು ಅವರನ್ನು ಪ್ರಶ್ನಿಸುತ್ತಿತ್ತು. ಬಾಂಗ್ಲಾದೇಶದ ರಚನೆಯು ಚೌಕಾಶಿಯಾಗಿರಲಿಲ್ಲ – ಅದು ಕಳೆದುಹೋದ ಐತಿಹಾಸಿಕ ಅವಕಾಶ.” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಸ್ತುತ ಉದ್ವಿಗ್ನತೆ ಮತ್ತು ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ಎರಡು ದೇಶಗಳ ನಡುವೆ ಕದನ ವಿರಾಮದ ಹಿನ್ನೆಲೆಯಲ್ಲಿ 1971 ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರ ನಿಲುವನ್ನು ಹಲವಾರು ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಇದರ ನಂತರ ಸಿಎಂ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಹಿಮಂತ ಬಿಸ್ವಾ ಸರ್ಮಾ ಅವರ ಈ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಸೃಷ್ಟಿ: ಒಂದು ತಂತ್ರಗತ ವಿಜಯ, ಆದರೆ ರಾಜತಾಂತ್ರಿಕ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. “1971ರ ಯುದ್ಧದಲ್ಲಿ ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರಿಂದ ಪಾಕಿಸ್ತಾನ ಎರಡು ಭಾಗವಾಗಿ ವಿಭಜನೆಗೊಂಡು ಬಾಂಗ್ಲಾದೇಶ ಸೃಷ್ಟಿಯಾಯಿತು. ಆದರೆ, ಈ ಗೆಲುವಿನ ಹೊರತಾಗಿಯೂ ಭಾರತದ ರಾಜಕೀಯ ನಾಯಕತ್ವವು ದೀರ್ಘಕಾಲೀನ ತಂತ್ರಗತ ಲಾಭಗಳನ್ನು ಪಡೆಯುವಲ್ಲಿ ವಿಫಲವಾಯಿತು.” ಎಂದು ಅವರು ಹೇಳಿದ್ದಾರೆ.

“ಭಾರತವು ವಿಮೋಚನೆಯ ಸಮಯದಲ್ಲಿ ಜಾತ್ಯತೀತ ಬಾಂಗ್ಲಾದೇಶವನ್ನು ಬೆಂಬಲಿಸಿದ್ದರೂ, 1988ರ ವೇಳೆಗೆ ಬಾಂಗ್ಲಾದೇಶವು ಇಸ್ಲಾಂ ಅನ್ನು ರಾಷ್ಟ್ರಧರ್ಮವನ್ನಾಗಿ ಘೋಷಿಸಿತು. ಇಂದು ಢಾಕಾದಲ್ಲಿ ರಾಜಕೀಯ ಇಸ್ಲಾಂ ಪ್ರಬಲವಾಗಿದೆ, ಇದು ಭಾರತ ಹೋರಾಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಹಿಂದೂ ಜನಸಂಖ್ಯೆ ಒಮ್ಮೆ 20% ಇತ್ತು, ಆದರೆ ಈಗ ಅದು 8%ಕ್ಕಿಂತ ಕಡಿಮೆಯಾಗಿದೆ. ವ್ಯವಸ್ಥಿತ ತಾರತಮ್ಯ ಮತ್ತು ಹಿಂಸೆಯಿಂದ ಹಿಂದೂಗಳು ತೊಂದರೆ ಅನುಭವಿಸುತ್ತಿದ್ದಾರೆ, ಆದರೆ ಭಾರತ ಈ ವಿಷಯದಲ್ಲಿ ಹೆಚ್ಚಾಗಿ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಯುದ್ಧದಲ್ಲಿ ಭಾರತ ಪ್ರಾಬಲ್ಯ ಹೊಂದಿದ್ದರೂ, ಸಿಲಿಗುರಿ ಕಾರಿಡಾರ್ (ಚಿಕನ್‌ನ ನೆಕ್) ಎಂಬ ಈ ಪ್ರದೇಶದ ದುರ್ಬಲತೆಯನ್ನು ಪರಿಹರಿಸಲು ಭಾರತ ವಿಫಲವಾಯಿತು. ಉತ್ತರ ಬಾಂಗ್ಲಾದೇಶದ ಮೂಲಕ ಸುರಕ್ಷಿತ ಭೂ ಮಾರ್ಗವನ್ನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ಲ, ಇದರಿಂದ ಈಶಾನ್ಯ ರಾಜ್ಯಗಳ ಸಂಪರ್ಕ ಸಮಸ್ಯೆ ಉಳಿದಿದೆ.” ಎಂದು ಅವರು ಹೇಳಿದ್ದಾರೆ.

“ಅಕ್ರಮ ಬಾಂಗ್ಲಾದೇಶಿ ವಲಸಿಗರ ಮರಳಿ ಕಳುಹಿಸುವ ಯಾವುದೇ ಒಪ್ಪಂದವನ್ನು ಮಾಡಲಾಗಿಲ್ಲ. ಇದರಿಂದ ಅಸ್ಸಾಂ, ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜನಸಂಖ್ಯಾಶಾಸ್ತ್ರೀಯ ಬದಲಾವಣೆ ಉಂಟಾಗಿ ಸಾಮಾಜಿಕ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ. ಜೊತೆಗೆ, ಭಾರತವು ಚಿತ್ತಗಾಂಗ್ ಬಂದರಿಗೆ ಪ್ರವೇಶವನ್ನು ಪಡೆಯಲು ವಿಫಲವಾಯಿತು. ಐವತ್ತು ವರ್ಷಗಳ ನಂತರವೂ ಈಶಾನ್ಯ ರಾಜ್ಯಗಳು ಭೂಪರಿವೃತವಾಗಿಯೇ ಉಳಿದಿವೆ, ಇದು ಆರ್ಥಿಕ ಅಭಿವೃದ್ಧಿಗೆ ತೊಡಕಾಗಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ದಶಕಗಳವರೆಗೆ ಭಾರತ ವಿರೋಧಿ ಉಗ್ರಗಾಮಿ ಗುಂಪುಗಳಿಗೆ ಆಶ್ರಯವಾಗಿತ್ತು, ಇದು 1971ರಲ್ಲಿ ಭಾರತ ಮಾಡಬೇಕಿದ್ದ ತಂತ್ರಗತ ಕ್ರಮಗಳ ಕೊರತೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

1971 ರ ಭಾರತ-ಪಾಕಿಸ್ತಾನ ಯುದ್ಧವನ್ನು ಬಾಂಗ್ಲಾದೇಶ ವಿಮೋಚನಾ ಯುದ್ಧ ಎಂದೂ ಕರೆಯುತ್ತಾರೆ. ಇದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್‌ ಸರ್ಕಾರದ ವಿರುದ್ಧ ನಡೆದ ದಂಗೆಯಿಂದ ಪ್ರಾರಂಭವಾಯಿತು. ಆ ವರ್ಷದ ಮಾರ್ಚ್‌ನಿಂದ, ಬಂಗಾಳಿ ರಾಷ್ಟ್ರೀಯವಾದಿಗಳು ಬಂಗಾಳಿ ಜನಸಂಖ್ಯೆಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಮೇಲೆ ಪಾಕಿಸ್ತಾನಿ ಪಡೆಗಳು ಕ್ರೂರವಾಗಿ ದಮನ ಮಾಡುತ್ತಿತ್ತು.

ಆಗಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ಪರವಾಗಿ ತಿಂಗಳುಗಟ್ಟಲೆ ಬೆಂಬಲ ನೀಡಿದ್ದರು. ಅದಾಗ್ಯೂ, ಭಾರತೀಯ ಸೇನೆಯು ಡಿಸೆಂಬರ್ 3, 1971 ರಂದು ಪಾಕಿಸ್ತಾನದೊಂದಿಗೆ ಪೂರ್ಣ ಪ್ರಮಾಣದ ಯುದ್ಧದಲ್ಲಿ ಔಪಚಾರಿಕವಾಗಿ ತೊಡಗಿತು.

ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಮತ್ತು ಅವರ ಸೈನಿಕರು ಢಾಕಾದಲ್ಲಿ ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿಯನ್ನು ಒಳಗೊಂಡ ಮಿತ್ರಪಕ್ಷಗಳಿಗೆ ಶರಣಾದರು. ಬಾಂಗ್ಲಾದೇಶದಲ್ಲಿ ಈ ದಿನವನ್ನು ‘ಬಿಜಯ್ ದಿಬೋಷ್’ ಎಂದು ಆಚರಿಸಲಾಗುತ್ತದೆ ಮತ್ತು ಪಾಕಿಸ್ತಾನದಿಂದ ಔಪಚಾರಿಕ ಸ್ವಾತಂತ್ರ್ಯ ಪಡೆದ ದಿನ ಎಂದು ಆಚರಿಸುತ್ತದೆ.

ಭಾರತ ಮತ್ತು ಪಾಕಿಸ್ತಾನ ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ನಿರ್ಧರಿಸಿದ ಮೇ 10ರ ಕದನ ವಿರಾಮದ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು 1971 ರ ಯುದ್ಧದ ಸಮಯದಲ್ಲಿ ಅಮೆರಿಕದ ಒತ್ತಡಕ್ಕೆ ಇಂದಿರಾ ಗಾಂಧಿ ಮಣಿಯದಿರುವ ಬಗ್ಗೆ ನೆನಪಿಸಿದ್ದರು. ಇದರ ನಂತರ, ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ, “ಇಂದಿರಾ ಗಾಂಧಿ – ಧೈರ್ಯ | ಮನವರಿಕೆ | ಬಲ” ಎಂಬ ಶೀರ್ಷಿಕೆಯನ್ನು ನೀಡಿತ್ತು. ಬಾಂಗ್ಲಾದೇಶ ವಿಮೋಚನೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...