Homeಮುಖಪುಟಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

1971 ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ಗೆದ್ದ ನಂತರ ಬಾಂಗ್ಲಾದೇಶ ರಚನೆಗೆ ಕಾರಣವಾದ ಪರಿಸ್ಥಿತಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ತಪ್ಪಾಗಿ ನಿರ್ವಹಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. ಬಾಂಗ್ಲಾ ವಿಮೋಚನೆಯನ್ನು ಒಂದು ತಂತ್ರಗತ ವಿಜಯವೆಂದು ಕರೆದರೂ, ರಾಜತಾಂತ್ರಿಕ ವೈಫಲ್ಯವೆಂದು ಅವರು ವಿಮರ್ಶಿಸಿದ್ದಾರೆ. ಬಾಂಗ್ಲಾದೇಶ ವಿಮೋಚನೆಯನ್ನು

“ಇಂದಿರಾ ಗಾಂಧಿ ಇಂದು ಜೀವಂತವಾಗಿದ್ದರೆ, ನಮ್ಮ ಸಶಸ್ತ್ರ ಪಡೆಗಳು ಗೆದ್ದ ನಿರ್ಣಾಯಕ ವಿಜಯವನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ರಾಷ್ಟ್ರವು ಅವರನ್ನು ಪ್ರಶ್ನಿಸುತ್ತಿತ್ತು. ಬಾಂಗ್ಲಾದೇಶದ ರಚನೆಯು ಚೌಕಾಶಿಯಾಗಿರಲಿಲ್ಲ – ಅದು ಕಳೆದುಹೋದ ಐತಿಹಾಸಿಕ ಅವಕಾಶ.” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಸ್ತುತ ಉದ್ವಿಗ್ನತೆ ಮತ್ತು ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ಎರಡು ದೇಶಗಳ ನಡುವೆ ಕದನ ವಿರಾಮದ ಹಿನ್ನೆಲೆಯಲ್ಲಿ 1971 ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರ ನಿಲುವನ್ನು ಹಲವಾರು ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಇದರ ನಂತರ ಸಿಎಂ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಹಿಮಂತ ಬಿಸ್ವಾ ಸರ್ಮಾ ಅವರ ಈ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಸೃಷ್ಟಿ: ಒಂದು ತಂತ್ರಗತ ವಿಜಯ, ಆದರೆ ರಾಜತಾಂತ್ರಿಕ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. “1971ರ ಯುದ್ಧದಲ್ಲಿ ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರಿಂದ ಪಾಕಿಸ್ತಾನ ಎರಡು ಭಾಗವಾಗಿ ವಿಭಜನೆಗೊಂಡು ಬಾಂಗ್ಲಾದೇಶ ಸೃಷ್ಟಿಯಾಯಿತು. ಆದರೆ, ಈ ಗೆಲುವಿನ ಹೊರತಾಗಿಯೂ ಭಾರತದ ರಾಜಕೀಯ ನಾಯಕತ್ವವು ದೀರ್ಘಕಾಲೀನ ತಂತ್ರಗತ ಲಾಭಗಳನ್ನು ಪಡೆಯುವಲ್ಲಿ ವಿಫಲವಾಯಿತು.” ಎಂದು ಅವರು ಹೇಳಿದ್ದಾರೆ.

“ಭಾರತವು ವಿಮೋಚನೆಯ ಸಮಯದಲ್ಲಿ ಜಾತ್ಯತೀತ ಬಾಂಗ್ಲಾದೇಶವನ್ನು ಬೆಂಬಲಿಸಿದ್ದರೂ, 1988ರ ವೇಳೆಗೆ ಬಾಂಗ್ಲಾದೇಶವು ಇಸ್ಲಾಂ ಅನ್ನು ರಾಷ್ಟ್ರಧರ್ಮವನ್ನಾಗಿ ಘೋಷಿಸಿತು. ಇಂದು ಢಾಕಾದಲ್ಲಿ ರಾಜಕೀಯ ಇಸ್ಲಾಂ ಪ್ರಬಲವಾಗಿದೆ, ಇದು ಭಾರತ ಹೋರಾಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಹಿಂದೂ ಜನಸಂಖ್ಯೆ ಒಮ್ಮೆ 20% ಇತ್ತು, ಆದರೆ ಈಗ ಅದು 8%ಕ್ಕಿಂತ ಕಡಿಮೆಯಾಗಿದೆ. ವ್ಯವಸ್ಥಿತ ತಾರತಮ್ಯ ಮತ್ತು ಹಿಂಸೆಯಿಂದ ಹಿಂದೂಗಳು ತೊಂದರೆ ಅನುಭವಿಸುತ್ತಿದ್ದಾರೆ, ಆದರೆ ಭಾರತ ಈ ವಿಷಯದಲ್ಲಿ ಹೆಚ್ಚಾಗಿ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಯುದ್ಧದಲ್ಲಿ ಭಾರತ ಪ್ರಾಬಲ್ಯ ಹೊಂದಿದ್ದರೂ, ಸಿಲಿಗುರಿ ಕಾರಿಡಾರ್ (ಚಿಕನ್‌ನ ನೆಕ್) ಎಂಬ ಈ ಪ್ರದೇಶದ ದುರ್ಬಲತೆಯನ್ನು ಪರಿಹರಿಸಲು ಭಾರತ ವಿಫಲವಾಯಿತು. ಉತ್ತರ ಬಾಂಗ್ಲಾದೇಶದ ಮೂಲಕ ಸುರಕ್ಷಿತ ಭೂ ಮಾರ್ಗವನ್ನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ಲ, ಇದರಿಂದ ಈಶಾನ್ಯ ರಾಜ್ಯಗಳ ಸಂಪರ್ಕ ಸಮಸ್ಯೆ ಉಳಿದಿದೆ.” ಎಂದು ಅವರು ಹೇಳಿದ್ದಾರೆ.

“ಅಕ್ರಮ ಬಾಂಗ್ಲಾದೇಶಿ ವಲಸಿಗರ ಮರಳಿ ಕಳುಹಿಸುವ ಯಾವುದೇ ಒಪ್ಪಂದವನ್ನು ಮಾಡಲಾಗಿಲ್ಲ. ಇದರಿಂದ ಅಸ್ಸಾಂ, ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜನಸಂಖ್ಯಾಶಾಸ್ತ್ರೀಯ ಬದಲಾವಣೆ ಉಂಟಾಗಿ ಸಾಮಾಜಿಕ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ. ಜೊತೆಗೆ, ಭಾರತವು ಚಿತ್ತಗಾಂಗ್ ಬಂದರಿಗೆ ಪ್ರವೇಶವನ್ನು ಪಡೆಯಲು ವಿಫಲವಾಯಿತು. ಐವತ್ತು ವರ್ಷಗಳ ನಂತರವೂ ಈಶಾನ್ಯ ರಾಜ್ಯಗಳು ಭೂಪರಿವೃತವಾಗಿಯೇ ಉಳಿದಿವೆ, ಇದು ಆರ್ಥಿಕ ಅಭಿವೃದ್ಧಿಗೆ ತೊಡಕಾಗಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ದಶಕಗಳವರೆಗೆ ಭಾರತ ವಿರೋಧಿ ಉಗ್ರಗಾಮಿ ಗುಂಪುಗಳಿಗೆ ಆಶ್ರಯವಾಗಿತ್ತು, ಇದು 1971ರಲ್ಲಿ ಭಾರತ ಮಾಡಬೇಕಿದ್ದ ತಂತ್ರಗತ ಕ್ರಮಗಳ ಕೊರತೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

1971 ರ ಭಾರತ-ಪಾಕಿಸ್ತಾನ ಯುದ್ಧವನ್ನು ಬಾಂಗ್ಲಾದೇಶ ವಿಮೋಚನಾ ಯುದ್ಧ ಎಂದೂ ಕರೆಯುತ್ತಾರೆ. ಇದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್‌ ಸರ್ಕಾರದ ವಿರುದ್ಧ ನಡೆದ ದಂಗೆಯಿಂದ ಪ್ರಾರಂಭವಾಯಿತು. ಆ ವರ್ಷದ ಮಾರ್ಚ್‌ನಿಂದ, ಬಂಗಾಳಿ ರಾಷ್ಟ್ರೀಯವಾದಿಗಳು ಬಂಗಾಳಿ ಜನಸಂಖ್ಯೆಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಮೇಲೆ ಪಾಕಿಸ್ತಾನಿ ಪಡೆಗಳು ಕ್ರೂರವಾಗಿ ದಮನ ಮಾಡುತ್ತಿತ್ತು.

ಆಗಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ಪರವಾಗಿ ತಿಂಗಳುಗಟ್ಟಲೆ ಬೆಂಬಲ ನೀಡಿದ್ದರು. ಅದಾಗ್ಯೂ, ಭಾರತೀಯ ಸೇನೆಯು ಡಿಸೆಂಬರ್ 3, 1971 ರಂದು ಪಾಕಿಸ್ತಾನದೊಂದಿಗೆ ಪೂರ್ಣ ಪ್ರಮಾಣದ ಯುದ್ಧದಲ್ಲಿ ಔಪಚಾರಿಕವಾಗಿ ತೊಡಗಿತು.

ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಮತ್ತು ಅವರ ಸೈನಿಕರು ಢಾಕಾದಲ್ಲಿ ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿಯನ್ನು ಒಳಗೊಂಡ ಮಿತ್ರಪಕ್ಷಗಳಿಗೆ ಶರಣಾದರು. ಬಾಂಗ್ಲಾದೇಶದಲ್ಲಿ ಈ ದಿನವನ್ನು ‘ಬಿಜಯ್ ದಿಬೋಷ್’ ಎಂದು ಆಚರಿಸಲಾಗುತ್ತದೆ ಮತ್ತು ಪಾಕಿಸ್ತಾನದಿಂದ ಔಪಚಾರಿಕ ಸ್ವಾತಂತ್ರ್ಯ ಪಡೆದ ದಿನ ಎಂದು ಆಚರಿಸುತ್ತದೆ.

ಭಾರತ ಮತ್ತು ಪಾಕಿಸ್ತಾನ ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ನಿರ್ಧರಿಸಿದ ಮೇ 10ರ ಕದನ ವಿರಾಮದ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು 1971 ರ ಯುದ್ಧದ ಸಮಯದಲ್ಲಿ ಅಮೆರಿಕದ ಒತ್ತಡಕ್ಕೆ ಇಂದಿರಾ ಗಾಂಧಿ ಮಣಿಯದಿರುವ ಬಗ್ಗೆ ನೆನಪಿಸಿದ್ದರು. ಇದರ ನಂತರ, ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ, “ಇಂದಿರಾ ಗಾಂಧಿ – ಧೈರ್ಯ | ಮನವರಿಕೆ | ಬಲ” ಎಂಬ ಶೀರ್ಷಿಕೆಯನ್ನು ನೀಡಿತ್ತು. ಬಾಂಗ್ಲಾದೇಶ ವಿಮೋಚನೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...