Homeಅಂತರಾಷ್ಟ್ರೀಯಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ ಎಲ್ಲಾ ಚಟುವಟಿಕೆಗಳನ್ನು, ಅದರ ಆನ್‌ಲೈನ್ ವೇದಿಕೆಗಳನ್ನು ಒಳಗೊಂಡಂತೆ, ದೇಶದ ಭಯೋತ್ಪಾದನಾ ವಿರೋಧಿ ಕಾಯ್ದೆಯಡಿಯಲ್ಲಿ ದೇಶದ ಮಧ್ಯಂತರ ಸರ್ಕಾರ ನಿಷೇಧಿಸಿದೆ ಎಂದು ದಿ ಡೈಲಿ ಸ್ಟಾರ್ ಶನಿವಾರ ವರದಿ ಮಾಡಿದೆ. ಪದಚ್ಯುತ ಪ್ರಧಾನಿ ಶೇಖ್

ನೂರಾರು ಪ್ರತಿಭಟನಾಕಾರರ ಸಾವಿಗೆ ಕಾರಣವೆಂದು ಆರೋಪಿಸಲ್ಪಟ್ಟ ಪಕ್ಷವನ್ನು ಅದರ ನಾಯಕರ ವಿಚಾರಣೆಗಳು ಮುಗಿಯುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಕಾಯ್ದೆಯಡಿ ಸರ್ಕಾರ ಹೇಳಿದೆ.

ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ವ್ಯಾಪಕವಾದ ಪ್ರತಿಭಟನೆಗಳ ನಡುವೆ ಬಾಂಗ್ಲಾದೇಶದ ಸರ್ಕಾರ ಪತನವಾಗಿತ್ತು. ಈ ವೇಳೆ ಪ್ರಧಾನಿ ಹಸೀನಾ ಅವರು ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. ಅವರು 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಇದರ ನಂತರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಆಗಸ್ಟ್ 8 ರಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು.

ಜುಲೈ ಮತ್ತು ಆಗಸ್ಟ್‌ನಲ್ಲಿ ಹಸೀನಾ ಅವರ ಆಡಳಿತದ ವಿರುದ್ಧ ಸಾರ್ವಜನಿಕ ದಂಗೆಯ ಸಮಯದಲ್ಲಿ ಭಿನ್ನಮತೀಯರ ಹತ್ಯೆಗಳು ಮತ್ತು ಬಲವಂತದ ಗಡಿಪಾರುಗಳನ್ನು ಮಾಡಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಹಸೀನಾ ಅವರನ್ನು ತನಿಖೆ ಮಾಡುವುದಾಗಿ ಮಧ್ಯಂತರ ಸರ್ಕಾರ ಹೇಳಿದೆ. ಅವರ ವಿರುದ್ಧ ಒಟ್ಟು 51 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 42 ಕೊಲೆ ಪ್ರಕರಣಗಳು ಸೇರಿವೆ. ಅವರ ಬಂಧನಕ್ಕೆ ಎರಡು ವಾರಂಟ್‌ಗಳನ್ನು ಸಹ ಹೊರಡಿಸಲಾಗಿದೆ.

2024 ರ ದಂಗೆಯನ್ನು ನಿಗ್ರಹಿಸಲು ಮಾಡಿದ ದೌರ್ಜನ್ಯಗಳಿಗಾಗಿ ಪಕ್ಷದ ಮೇಲೆ ನಿಷೇಧ ಹೇರಲು ಮತ್ತು ಅದರ ಮೇಲೆ ಮೊಕದ್ದಮೆ ಹೂಡಲು ಮೂರು ದಿನಗಳ ಪ್ರತಿಭಟನೆಗಳ ನಂತರ, ಯೂನಸ್ ಅಧ್ಯಕ್ಷತೆಯಲ್ಲಿ ನಡೆದ ಸಲಹೆಗಾರರ ​​ಮಂಡಳಿಯ ಸಭೆಯಲ್ಲಿ ಅವಾಮಿ ಲೀಗ್ ಅನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ.

“ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸುವುದು, ದಂಗೆಯ ನಾಯಕರು ಮತ್ತು ಹೋರಾಟಗಾರರನ್ನು ರಕ್ಷಿಸುವುದು ಮತ್ತು ನ್ಯಾಯಮಂಡಳಿ ವಿಚಾರಣೆಯಲ್ಲಿ ಭಾಗಿಯಾಗಿರುವ ವಾದಿಗಳು ಮತ್ತು ಸಾಕ್ಷಿಗಳನ್ನು ರಕ್ಷಿಸುವುದು ನಿಷೇಧದ ಗುರಿಯಾಗಿದೆ” ಎಂದು ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಹೇಳಿದ್ದಾರೆ.

“ದೇಶಾದ್ಯಂತ ಫ್ಯಾಸಿಸ್ಟ್ ಕೊಲೆಗಾರರನ್ನು ಗುರುತಿಸಬೇಕು ಮತ್ತು ಅವರನ್ನು ತ್ವರಿತವಾಗಿ ಕಾನೂನಿನ ಕುಣಿಕೆಗೆ ತರಬೇಕು” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛಾತ್ರ ಲೀಗ್ ಅನ್ನು ವಿದ್ಯಾರ್ಥಿ ಪ್ರತಿಭಟನೆಗಳ ಸಮಯದಲ್ಲಿ ಪ್ರತಿಭಟನಾಕಾರರ ಮೇಲೆ ಹಿಂಸಾತ್ಮಕ ದಾಳಿ ನಡೆಸಿದ್ದಕ್ಕಾಗಿ ”ಭಯೋತ್ಪಾದಕ ಸಂಘಟನೆ” ಎಂದು ಹೆಸರಿಸಿ ನಂತರ ನಿಷೇಧಿಸಲಾಯಿತು ಎಂದು ಅಲ್ ಜಜೀರಾ ವರದಿ ಮಾಡಿದೆ. ಶನಿವಾರದ ನಿಷೇಧಕ್ಕೆ ಪ್ರತಿಕ್ರಿಯಿಸಿದ ಅವಾಮಿ ಲೀಗ್ ಅದರ ಮೇಲಿನ ನಿಷೇಧ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ಎಂದು ಹೇಳಿದೆ.

“ಫ್ಯಾಸಿಸ್ಟ್ ಸರ್ವಾಧಿಕಾರಿ ಯೂನಸ್ ಆಡಳಿತದ ಈ ನಿರ್ಧಾರವನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ ಮತ್ತು ಅದರ ವಿರುದ್ಧ ನಾವು ತೀವ್ರವಾಗಿ ಪ್ರತಿಭಟಿಸುತ್ತೇವೆ” ಎಂದು ಪಕ್ಷವು ಎಕ್ಸ್‌ನಲ್ಲಿ ಹೇಳಿದೆ. “ಅದೇ ಸಮಯದಲ್ಲಿ, ಬಾಂಗ್ಲಾದೇಶ ಅವಾಮಿ ಲೀಗ್ ಈ ಸರ್ವಾಧಿಕಾರಿ ನಿರ್ಧಾರವನ್ನು ನಿರ್ಲಕ್ಷಿಸಿ, ಸರಿಯಾದ ಸಮಯದಲ್ಲಿ ತನ್ನ ಚಟುವಟಿಕೆಗಳನ್ನು ಮುಂದುವರಿಸುತ್ತದೆ ಎಂದು ನಾವು ದೃಢವಾಗಿ ಘೋಷಿಸುತ್ತೇವೆ.” ಎಂದು ಅದು ಹೇಳಿದೆ.

ಬಾಂಗ್ಲಾದೇಶದ ಕಾನೂನಿನ ಅಡಿಯಲ್ಲಿ, ಚುನಾವಣಾ ಆಯೋಗದಲ್ಲಿ ಅವಾಮಿ ಲೀಗ್‌ನ ನೋಂದಣಿಯನ್ನು ರದ್ದುಗೊಳಿಸಿದರೆ, ಡಿಸೆಂಬರ್ 2025 ಮತ್ತು ಜೂನ್ 2026 ರ ನಡುವೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸುವುದನ್ನು ಪಕ್ಷವು ನಿಷೇಧಿಸಲಾಗುವುದು ಎಂದು ಪಿಟಿಐ ವರದಿ ಮಾಡಿದೆ. ಹಸೀನಾ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ತನ್ನ ಮೇಲೆ ರಾಜಕೀಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಪದಚ್ಯುತ ಪ್ರಧಾನಿ ಶೇಖ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...