Homeಅಂತರಾಷ್ಟ್ರೀಯಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

- Advertisement -
- Advertisement -

ಬಾಂಗ್ಲಾದೇಶದ ದೇವಸ್ಥಾನವೊಂದಕ್ಕೆ ಪ್ರಧಾನಿ ಮೋದಿ ಉಡುಗೊರೆಯಾಗಿದ್ದ ಕಾಳಿ ದೇವಿಯ ಕಿರೀಟವನ್ನು ದಸರಾ ಆಚರಣೆಯ ವೇಳೆ ಕಳವು ಮಾಡಲಾಗಿದ್ದು, ಇದನ್ನು ಭಾರತ ಶನಿವಾರ ಖಂಡಿಸಿದೆ. ಇದು “ದೇಶದ ವ್ಯವಸ್ಥಿತ ಅಪವಿತ್ರಗೊಳಿಸುವಿಕೆ” ಎಂದು ಕರೆದಿದೆ. ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾರ್ಚ್ 2021 ರಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಸತ್ಖೈರಾದ ಜೆಶೋರೇಶ್ವರಿ ದೇವಸ್ಥಾನದಲ್ಲಿರುವ ಹಿಂದೂ ದೇವತೆಗೆ ಬೆಳ್ಳಿ, ಚಿನ್ನದ ಲೇಪಿತ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದಸರಾ ಆಚರಣೆ ನಡೆಯುತ್ತಿರುವ ವೇಳೆ ಕಿರೀಟವನ್ನು ಕಳ್ಳತನ ಮಾಡಲಾಗಿದ್ದು, ಕಳ್ಳತನ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಢಾಕಾದ ತಂತಿಬಜಾರ್‌ನಲ್ಲಿನ ಪೂಜಾ ಮಂಟಪದ ಮೇಲಿನ ದಾಳಿ ಮತ್ತು ಸತ್ಖೈರಾದ ಪೂಜ್ಯ ಜೇಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನವನ್ನು ನಾವು ಗಂಭೀರ ಕಳವಳದಿಂದ ಗಮನಿಸಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಬಾಂಗ್ಲಾದೇಶ

“ಇವು ಶೋಚನೀಯ ಘಟನೆಗಳಾಗಿದ್ದು, ಅವು ವ್ಯವಸ್ಥಿತ ಮಾದರಿಯಲ್ಲಿ ನಡೆಯುತ್ತಿವೆ. ಈ ಅಪವಿತ್ರಗೊಳಿಸುವಿಕೆ ಮತ್ತು ದೇವಾಲಯಗಳು ಮತ್ತು ದೇವತೆಗಳಿಗೆ ಹಾನಿಯನ್ನು ನಾವು ಹಲವಾರು ದಿನಗಳಿಂದ ನೋಡಿದ್ದೇವೆ” ಎಂದು ಸರ್ಕಾರ ಹೇಳದೆ.

“ವಿಶೇಷವಾಗಿ ಇಂತಹ ಮಂಗಳಕರ ಹಬ್ಬದ ಸಮಯದಲ್ಲಿ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬಾಂಗ್ಲಾದೇಶ ಸರ್ಕಾರಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜೇಶೋರೇಶ್ವರಿ ದೇವಸ್ಥಾನವು ಭಾರತ ಮತ್ತು ನೆರೆಯ ದೇಶಗಳಲ್ಲಿ ಹರಡಿರುವ 51 ಶಕ್ತಿ ಪೀಠಗಳಲ್ಲಿ ಒಂದಾಗಿದೆ.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಶುಕ್ರವಾರ ಢಾಕಾದ ತಂತಿಬಜಾರ್ ಪ್ರದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆಯನ್ನು ಸಚಿವಾಲಯ ಹೈಲೈಟ್ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದರು.

ದಸರಾ ಆಚರಣೆಯ ವಿರುದ್ಧ ಆರಂಭದಲ್ಲಿ ಹಿಂದೂ ಸಮುದಾಯಕ್ಕೆ ಬಹುಸಂಖ್ಯಾತ ಸಮುದಾಯದಿಂದ ಬೆದರಿಕೆಗಳು ಬಂದಿದ್ದವು. ಹಿಂದೂಗಳು ತಮ್ಮ ಹಬ್ಬವನ್ನು ಬಹುಸಂಖ್ಯಾತ ಮುಸ್ಲಿಮರ ಭಾವನೆಗಳನ್ನು ಉಲ್ಲಂಘಿಸುವುದರಿಂದ ತಮ್ಮ ಹಬ್ಬವನ್ನು ಬಹಿರಂಗವಾಗಿ ಆಚರಿಸದಂತೆ ಎಚ್ಚರಿಕೆ ನೀಡಲಾಗಿತ್ತು ಎಂದು ವರದಿಯಾಗಿದೆ.

“ಅಕ್ಟೋಬರ್ 1 ರಿಂದ, ನಡೆಯುತ್ತಿರುವ ದಸರಾ ಆಚರಣೆಗೆ ಸಂಬಂಧಿಸಿದ 35 ಘಟನೆಗಳು ದೇಶಾದ್ಯಂತ ಸಂಭವಿಸಿವೆ. ಒಟ್ಟು 11 ಪ್ರಕರಣಗಳನ್ನು ದಾಖಲಿಸಲಾಗಿದ್ದು, 24 ಸಾಮಾನ್ಯ ಡೈರಿಗಳು (ಜಿಡಿ) ದಾಖಲಿಸಲಾಗಿದೆ ಮತ್ತು 17 ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಎಂಡಿ ಮೊಯಿನುಲ್ ಇಸ್ಲಾಂ ಹೇಳಿದ್ದಾರೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ವಿಡಿಯೊ ನೋಡಿ: ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಸಿದವನಿಗೆ ಪೊಲೀಸರಿಂದ ಗುಂಡೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...