Homeಅಂತರಾಷ್ಟ್ರೀಯಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

- Advertisement -
- Advertisement -

ಬಾಂಗ್ಲಾದೇಶದ ದೇವಸ್ಥಾನವೊಂದಕ್ಕೆ ಪ್ರಧಾನಿ ಮೋದಿ ಉಡುಗೊರೆಯಾಗಿದ್ದ ಕಾಳಿ ದೇವಿಯ ಕಿರೀಟವನ್ನು ದಸರಾ ಆಚರಣೆಯ ವೇಳೆ ಕಳವು ಮಾಡಲಾಗಿದ್ದು, ಇದನ್ನು ಭಾರತ ಶನಿವಾರ ಖಂಡಿಸಿದೆ. ಇದು “ದೇಶದ ವ್ಯವಸ್ಥಿತ ಅಪವಿತ್ರಗೊಳಿಸುವಿಕೆ” ಎಂದು ಕರೆದಿದೆ. ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾರ್ಚ್ 2021 ರಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಸತ್ಖೈರಾದ ಜೆಶೋರೇಶ್ವರಿ ದೇವಸ್ಥಾನದಲ್ಲಿರುವ ಹಿಂದೂ ದೇವತೆಗೆ ಬೆಳ್ಳಿ, ಚಿನ್ನದ ಲೇಪಿತ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದಸರಾ ಆಚರಣೆ ನಡೆಯುತ್ತಿರುವ ವೇಳೆ ಕಿರೀಟವನ್ನು ಕಳ್ಳತನ ಮಾಡಲಾಗಿದ್ದು, ಕಳ್ಳತನ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಢಾಕಾದ ತಂತಿಬಜಾರ್‌ನಲ್ಲಿನ ಪೂಜಾ ಮಂಟಪದ ಮೇಲಿನ ದಾಳಿ ಮತ್ತು ಸತ್ಖೈರಾದ ಪೂಜ್ಯ ಜೇಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನವನ್ನು ನಾವು ಗಂಭೀರ ಕಳವಳದಿಂದ ಗಮನಿಸಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಬಾಂಗ್ಲಾದೇಶ

“ಇವು ಶೋಚನೀಯ ಘಟನೆಗಳಾಗಿದ್ದು, ಅವು ವ್ಯವಸ್ಥಿತ ಮಾದರಿಯಲ್ಲಿ ನಡೆಯುತ್ತಿವೆ. ಈ ಅಪವಿತ್ರಗೊಳಿಸುವಿಕೆ ಮತ್ತು ದೇವಾಲಯಗಳು ಮತ್ತು ದೇವತೆಗಳಿಗೆ ಹಾನಿಯನ್ನು ನಾವು ಹಲವಾರು ದಿನಗಳಿಂದ ನೋಡಿದ್ದೇವೆ” ಎಂದು ಸರ್ಕಾರ ಹೇಳದೆ.

“ವಿಶೇಷವಾಗಿ ಇಂತಹ ಮಂಗಳಕರ ಹಬ್ಬದ ಸಮಯದಲ್ಲಿ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬಾಂಗ್ಲಾದೇಶ ಸರ್ಕಾರಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜೇಶೋರೇಶ್ವರಿ ದೇವಸ್ಥಾನವು ಭಾರತ ಮತ್ತು ನೆರೆಯ ದೇಶಗಳಲ್ಲಿ ಹರಡಿರುವ 51 ಶಕ್ತಿ ಪೀಠಗಳಲ್ಲಿ ಒಂದಾಗಿದೆ.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಶುಕ್ರವಾರ ಢಾಕಾದ ತಂತಿಬಜಾರ್ ಪ್ರದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆಯನ್ನು ಸಚಿವಾಲಯ ಹೈಲೈಟ್ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದರು.

ದಸರಾ ಆಚರಣೆಯ ವಿರುದ್ಧ ಆರಂಭದಲ್ಲಿ ಹಿಂದೂ ಸಮುದಾಯಕ್ಕೆ ಬಹುಸಂಖ್ಯಾತ ಸಮುದಾಯದಿಂದ ಬೆದರಿಕೆಗಳು ಬಂದಿದ್ದವು. ಹಿಂದೂಗಳು ತಮ್ಮ ಹಬ್ಬವನ್ನು ಬಹುಸಂಖ್ಯಾತ ಮುಸ್ಲಿಮರ ಭಾವನೆಗಳನ್ನು ಉಲ್ಲಂಘಿಸುವುದರಿಂದ ತಮ್ಮ ಹಬ್ಬವನ್ನು ಬಹಿರಂಗವಾಗಿ ಆಚರಿಸದಂತೆ ಎಚ್ಚರಿಕೆ ನೀಡಲಾಗಿತ್ತು ಎಂದು ವರದಿಯಾಗಿದೆ.

“ಅಕ್ಟೋಬರ್ 1 ರಿಂದ, ನಡೆಯುತ್ತಿರುವ ದಸರಾ ಆಚರಣೆಗೆ ಸಂಬಂಧಿಸಿದ 35 ಘಟನೆಗಳು ದೇಶಾದ್ಯಂತ ಸಂಭವಿಸಿವೆ. ಒಟ್ಟು 11 ಪ್ರಕರಣಗಳನ್ನು ದಾಖಲಿಸಲಾಗಿದ್ದು, 24 ಸಾಮಾನ್ಯ ಡೈರಿಗಳು (ಜಿಡಿ) ದಾಖಲಿಸಲಾಗಿದೆ ಮತ್ತು 17 ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಎಂಡಿ ಮೊಯಿನುಲ್ ಇಸ್ಲಾಂ ಹೇಳಿದ್ದಾರೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ವಿಡಿಯೊ ನೋಡಿ: ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಸಿದವನಿಗೆ ಪೊಲೀಸರಿಂದ ಗುಂಡೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...