Homeಮುಖಪುಟಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

- Advertisement -
- Advertisement -

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿರುವ ಅವರು ವಾಸಿಸುತ್ತಿದ್ದ ಮನೆ ‘ಧನ್ಮೊಂಡಿ -32’ ಕಡೆಗೆ ಬುಲ್ಡೋಝರ್ ಮೆರವಣಿಗೆಗೆ ಕರೆ ನೀಡಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಪ್ರತಿಭಟನೆ ಪ್ರಾರಂಭವಾಯಿತು ಎಂದು ಬಾಂಗ್ಲಾದ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ. ಪ್ರತಿಭಟನಾಕಾರರು ಏಕಾಏಕಿ ‘ಧನ್ಮೊಂಡಿ -32’ರ ಕಡೆಗೆ ಮೆರವಣಿಗೆ ಘೋಷಿಸಿದರು ಎಂದಿದೆ.

ಪ್ರತಿಭಟನಾಕಾರರು ಪ್ರವೇಶ ದ್ವಾರವನ್ನು ಮುರಿದು ‘ಧನ್ಮೊಂಡಿ -32’ರ ಆವರಣಕ್ಕೆ ನುಗ್ಗಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವಾರು ವಿಡಿಯೋಗಳಲ್ಲಿ ಅವರು ಮುಜಿಬುರ್ ರೆಹಮಾನ್ ನಿವಾಸಕ್ಕೆ ಬೆಂಕಿ ಹಚ್ಚುವುದನ್ನು ನೋಡಬಹುದು. ಪ್ರತಿಭಟನಾಕಾರರ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸಲುವಾಗಿ ಅವರ ಮನವೊಲಿಸಲು ಸೇನೆಯು ಸ್ಥಳಕ್ಕೆ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಪಿಟಿಐ ವರದಿ ವಿವರಿಸಿದೆ.

560 ಜನರ ಸಾವಿಗೆ ಕಾರಣವಾದ ಅವಾಮಿ ಲೀಗ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯ ನಂತರ, ಆಗಸ್ಟ್ 5, 2024 ರಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈಗಲೂ ಅವರು ಭಾರತದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಹಸೀನಾ 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಹಸೀನಾ ಅವರ ಪಲಾಯನದ ಬಳಿಕ ಅವಾಮಿ ಲೀಗ್ ಸರ್ಕಾರ ಪತನಗೊಂಡಿದೆ. ನಂತರ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ಅವರು ಆಗಸ್ಟ್ 8ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬುಧವಾರ ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಆಯೋಜಿಸಿದ್ದ ಭಾಷಣದಲ್ಲಿ, ಹಸೀನಾ ಅವರು ಬಾಂಗ್ಲಾದೇಶದ ನಾಗರಿಕರು ಪ್ರಸ್ತುತ ಆಡಳಿತದ ವಿರುದ್ಧ ಪ್ರತಿರೋಧವನ್ನು ಸಂಘಟಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬಲಿಕೊಟ್ಟು ನಾವು ಗಳಿಸಿದ ರಾಷ್ಟ್ರಧ್ವಜ, ಸಂವಿಧಾನ ಮತ್ತು ಸ್ವಾತಂತ್ರ್ಯವನ್ನು ಬುಲ್ಡೋಝರ್ ಬಳಸಿ ನಾಶಮಾಡುವ ಶಕ್ತಿ ಅವರಿಗೆ ಇನ್ನೂ ಬಂದಿಲ್ಲ” ಎಂದು ಯೂನುಸ್ ಆಡಳಿತದ ಬಗ್ಗೆ ಹಸೀನಾ ಹೇಳಿರುವುದಾಗಿ ವರದಿ ತಿಳಿಸಿದೆ.

“ಅವರು ಕಟ್ಟಡಗಳನ್ನು ಕೆಡವಬಹುದು, ಆದರೆ ಇತಿಹಾಸವನ್ನಲ್ಲ. ಇತಿಹಾಸವು ತನ್ನ ಸೇಡನ್ನು ತೀರಿಸಿಕೊಳ್ಳಲಿದೆ ಎಂಬುವುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹಸೀನಾ ಹೇಳಿದ್ದಾರೆ.

ಮಂಗಳವಾರ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ ಇಂಕಿಲಾಬ್ ಮಂಚ್‌ನ ಸಂಚಾಲಕ ಮತ್ತು ಜಾತ್ಯ ನಾಗೋರಿಕ್ ಸಮಿತಿಯ ಸದಸ್ಯ ಷರೀಫ್ ಒಸ್ಮಾನ್ ಬಿನ್ ಹಾದಿ ಧನ್ಮೊಂಡಿ -32ರ ಕಡೆಗೆ ಮೆರವಣಿಗೆ ನಡೆಸಲು ಕರೆ ನೀಡಿದ್ದಾರೆ ಎಂದು ಪ್ರೋಥೋಮ್ ಅಲೋ ವರದಿ ತಿಳಿಸಿದೆ.

“ಪ್ಯಾಸಿಸಂನ ಪವಿತ್ರ ಸ್ಥಳದಿಂದ ಬಾಂಗ್ಲಾದೇಶ ಇಂದು ಮುಕ್ತಿ ಹೊಂದಲಿದೆ” ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಚಾಲಕ ಹಸ್ನತ್ ಅಬ್ದುಲ್ಲಾ ಕೂಡ ಬುಧವಾರ ಸಂಜೆ 7 ಗಂಟೆಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದರು ಎಂದು ವರದಿ ಹೇಳಿದೆ.

2024ರ ಆಗಸ್ಟ್ 5 ರಂದು ಕೂಡ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...