Homeಮುಖಪುಟಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

- Advertisement -
- Advertisement -

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿರುವ ಅವರು ವಾಸಿಸುತ್ತಿದ್ದ ಮನೆ ‘ಧನ್ಮೊಂಡಿ -32’ ಕಡೆಗೆ ಬುಲ್ಡೋಝರ್ ಮೆರವಣಿಗೆಗೆ ಕರೆ ನೀಡಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಪ್ರತಿಭಟನೆ ಪ್ರಾರಂಭವಾಯಿತು ಎಂದು ಬಾಂಗ್ಲಾದ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ. ಪ್ರತಿಭಟನಾಕಾರರು ಏಕಾಏಕಿ ‘ಧನ್ಮೊಂಡಿ -32’ರ ಕಡೆಗೆ ಮೆರವಣಿಗೆ ಘೋಷಿಸಿದರು ಎಂದಿದೆ.

ಪ್ರತಿಭಟನಾಕಾರರು ಪ್ರವೇಶ ದ್ವಾರವನ್ನು ಮುರಿದು ‘ಧನ್ಮೊಂಡಿ -32’ರ ಆವರಣಕ್ಕೆ ನುಗ್ಗಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವಾರು ವಿಡಿಯೋಗಳಲ್ಲಿ ಅವರು ಮುಜಿಬುರ್ ರೆಹಮಾನ್ ನಿವಾಸಕ್ಕೆ ಬೆಂಕಿ ಹಚ್ಚುವುದನ್ನು ನೋಡಬಹುದು. ಪ್ರತಿಭಟನಾಕಾರರ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸಲುವಾಗಿ ಅವರ ಮನವೊಲಿಸಲು ಸೇನೆಯು ಸ್ಥಳಕ್ಕೆ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಪಿಟಿಐ ವರದಿ ವಿವರಿಸಿದೆ.

560 ಜನರ ಸಾವಿಗೆ ಕಾರಣವಾದ ಅವಾಮಿ ಲೀಗ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯ ನಂತರ, ಆಗಸ್ಟ್ 5, 2024 ರಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈಗಲೂ ಅವರು ಭಾರತದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಹಸೀನಾ 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಹಸೀನಾ ಅವರ ಪಲಾಯನದ ಬಳಿಕ ಅವಾಮಿ ಲೀಗ್ ಸರ್ಕಾರ ಪತನಗೊಂಡಿದೆ. ನಂತರ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ಅವರು ಆಗಸ್ಟ್ 8ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬುಧವಾರ ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಆಯೋಜಿಸಿದ್ದ ಭಾಷಣದಲ್ಲಿ, ಹಸೀನಾ ಅವರು ಬಾಂಗ್ಲಾದೇಶದ ನಾಗರಿಕರು ಪ್ರಸ್ತುತ ಆಡಳಿತದ ವಿರುದ್ಧ ಪ್ರತಿರೋಧವನ್ನು ಸಂಘಟಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬಲಿಕೊಟ್ಟು ನಾವು ಗಳಿಸಿದ ರಾಷ್ಟ್ರಧ್ವಜ, ಸಂವಿಧಾನ ಮತ್ತು ಸ್ವಾತಂತ್ರ್ಯವನ್ನು ಬುಲ್ಡೋಝರ್ ಬಳಸಿ ನಾಶಮಾಡುವ ಶಕ್ತಿ ಅವರಿಗೆ ಇನ್ನೂ ಬಂದಿಲ್ಲ” ಎಂದು ಯೂನುಸ್ ಆಡಳಿತದ ಬಗ್ಗೆ ಹಸೀನಾ ಹೇಳಿರುವುದಾಗಿ ವರದಿ ತಿಳಿಸಿದೆ.

“ಅವರು ಕಟ್ಟಡಗಳನ್ನು ಕೆಡವಬಹುದು, ಆದರೆ ಇತಿಹಾಸವನ್ನಲ್ಲ. ಇತಿಹಾಸವು ತನ್ನ ಸೇಡನ್ನು ತೀರಿಸಿಕೊಳ್ಳಲಿದೆ ಎಂಬುವುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹಸೀನಾ ಹೇಳಿದ್ದಾರೆ.

ಮಂಗಳವಾರ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ ಇಂಕಿಲಾಬ್ ಮಂಚ್‌ನ ಸಂಚಾಲಕ ಮತ್ತು ಜಾತ್ಯ ನಾಗೋರಿಕ್ ಸಮಿತಿಯ ಸದಸ್ಯ ಷರೀಫ್ ಒಸ್ಮಾನ್ ಬಿನ್ ಹಾದಿ ಧನ್ಮೊಂಡಿ -32ರ ಕಡೆಗೆ ಮೆರವಣಿಗೆ ನಡೆಸಲು ಕರೆ ನೀಡಿದ್ದಾರೆ ಎಂದು ಪ್ರೋಥೋಮ್ ಅಲೋ ವರದಿ ತಿಳಿಸಿದೆ.

“ಪ್ಯಾಸಿಸಂನ ಪವಿತ್ರ ಸ್ಥಳದಿಂದ ಬಾಂಗ್ಲಾದೇಶ ಇಂದು ಮುಕ್ತಿ ಹೊಂದಲಿದೆ” ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಚಾಲಕ ಹಸ್ನತ್ ಅಬ್ದುಲ್ಲಾ ಕೂಡ ಬುಧವಾರ ಸಂಜೆ 7 ಗಂಟೆಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದರು ಎಂದು ವರದಿ ಹೇಳಿದೆ.

2024ರ ಆಗಸ್ಟ್ 5 ರಂದು ಕೂಡ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...