Homeಮುಖಪುಟಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

- Advertisement -
- Advertisement -

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿರುವ ಅವರು ವಾಸಿಸುತ್ತಿದ್ದ ಮನೆ ‘ಧನ್ಮೊಂಡಿ -32’ ಕಡೆಗೆ ಬುಲ್ಡೋಝರ್ ಮೆರವಣಿಗೆಗೆ ಕರೆ ನೀಡಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಪ್ರತಿಭಟನೆ ಪ್ರಾರಂಭವಾಯಿತು ಎಂದು ಬಾಂಗ್ಲಾದ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ. ಪ್ರತಿಭಟನಾಕಾರರು ಏಕಾಏಕಿ ‘ಧನ್ಮೊಂಡಿ -32’ರ ಕಡೆಗೆ ಮೆರವಣಿಗೆ ಘೋಷಿಸಿದರು ಎಂದಿದೆ.

ಪ್ರತಿಭಟನಾಕಾರರು ಪ್ರವೇಶ ದ್ವಾರವನ್ನು ಮುರಿದು ‘ಧನ್ಮೊಂಡಿ -32’ರ ಆವರಣಕ್ಕೆ ನುಗ್ಗಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವಾರು ವಿಡಿಯೋಗಳಲ್ಲಿ ಅವರು ಮುಜಿಬುರ್ ರೆಹಮಾನ್ ನಿವಾಸಕ್ಕೆ ಬೆಂಕಿ ಹಚ್ಚುವುದನ್ನು ನೋಡಬಹುದು. ಪ್ರತಿಭಟನಾಕಾರರ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸಲುವಾಗಿ ಅವರ ಮನವೊಲಿಸಲು ಸೇನೆಯು ಸ್ಥಳಕ್ಕೆ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಪಿಟಿಐ ವರದಿ ವಿವರಿಸಿದೆ.

560 ಜನರ ಸಾವಿಗೆ ಕಾರಣವಾದ ಅವಾಮಿ ಲೀಗ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯ ನಂತರ, ಆಗಸ್ಟ್ 5, 2024 ರಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈಗಲೂ ಅವರು ಭಾರತದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಹಸೀನಾ 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಹಸೀನಾ ಅವರ ಪಲಾಯನದ ಬಳಿಕ ಅವಾಮಿ ಲೀಗ್ ಸರ್ಕಾರ ಪತನಗೊಂಡಿದೆ. ನಂತರ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ಅವರು ಆಗಸ್ಟ್ 8ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬುಧವಾರ ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಆಯೋಜಿಸಿದ್ದ ಭಾಷಣದಲ್ಲಿ, ಹಸೀನಾ ಅವರು ಬಾಂಗ್ಲಾದೇಶದ ನಾಗರಿಕರು ಪ್ರಸ್ತುತ ಆಡಳಿತದ ವಿರುದ್ಧ ಪ್ರತಿರೋಧವನ್ನು ಸಂಘಟಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬಲಿಕೊಟ್ಟು ನಾವು ಗಳಿಸಿದ ರಾಷ್ಟ್ರಧ್ವಜ, ಸಂವಿಧಾನ ಮತ್ತು ಸ್ವಾತಂತ್ರ್ಯವನ್ನು ಬುಲ್ಡೋಝರ್ ಬಳಸಿ ನಾಶಮಾಡುವ ಶಕ್ತಿ ಅವರಿಗೆ ಇನ್ನೂ ಬಂದಿಲ್ಲ” ಎಂದು ಯೂನುಸ್ ಆಡಳಿತದ ಬಗ್ಗೆ ಹಸೀನಾ ಹೇಳಿರುವುದಾಗಿ ವರದಿ ತಿಳಿಸಿದೆ.

“ಅವರು ಕಟ್ಟಡಗಳನ್ನು ಕೆಡವಬಹುದು, ಆದರೆ ಇತಿಹಾಸವನ್ನಲ್ಲ. ಇತಿಹಾಸವು ತನ್ನ ಸೇಡನ್ನು ತೀರಿಸಿಕೊಳ್ಳಲಿದೆ ಎಂಬುವುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹಸೀನಾ ಹೇಳಿದ್ದಾರೆ.

ಮಂಗಳವಾರ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ ಇಂಕಿಲಾಬ್ ಮಂಚ್‌ನ ಸಂಚಾಲಕ ಮತ್ತು ಜಾತ್ಯ ನಾಗೋರಿಕ್ ಸಮಿತಿಯ ಸದಸ್ಯ ಷರೀಫ್ ಒಸ್ಮಾನ್ ಬಿನ್ ಹಾದಿ ಧನ್ಮೊಂಡಿ -32ರ ಕಡೆಗೆ ಮೆರವಣಿಗೆ ನಡೆಸಲು ಕರೆ ನೀಡಿದ್ದಾರೆ ಎಂದು ಪ್ರೋಥೋಮ್ ಅಲೋ ವರದಿ ತಿಳಿಸಿದೆ.

“ಪ್ಯಾಸಿಸಂನ ಪವಿತ್ರ ಸ್ಥಳದಿಂದ ಬಾಂಗ್ಲಾದೇಶ ಇಂದು ಮುಕ್ತಿ ಹೊಂದಲಿದೆ” ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಚಾಲಕ ಹಸ್ನತ್ ಅಬ್ದುಲ್ಲಾ ಕೂಡ ಬುಧವಾರ ಸಂಜೆ 7 ಗಂಟೆಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದರು ಎಂದು ವರದಿ ಹೇಳಿದೆ.

2024ರ ಆಗಸ್ಟ್ 5 ರಂದು ಕೂಡ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...