Homeಮುಖಪುಟಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

- Advertisement -
- Advertisement -

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿರುವ ಅವರು ವಾಸಿಸುತ್ತಿದ್ದ ಮನೆ ‘ಧನ್ಮೊಂಡಿ -32’ ಕಡೆಗೆ ಬುಲ್ಡೋಝರ್ ಮೆರವಣಿಗೆಗೆ ಕರೆ ನೀಡಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಪ್ರತಿಭಟನೆ ಪ್ರಾರಂಭವಾಯಿತು ಎಂದು ಬಾಂಗ್ಲಾದ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ. ಪ್ರತಿಭಟನಾಕಾರರು ಏಕಾಏಕಿ ‘ಧನ್ಮೊಂಡಿ -32’ರ ಕಡೆಗೆ ಮೆರವಣಿಗೆ ಘೋಷಿಸಿದರು ಎಂದಿದೆ.

ಪ್ರತಿಭಟನಾಕಾರರು ಪ್ರವೇಶ ದ್ವಾರವನ್ನು ಮುರಿದು ‘ಧನ್ಮೊಂಡಿ -32’ರ ಆವರಣಕ್ಕೆ ನುಗ್ಗಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವಾರು ವಿಡಿಯೋಗಳಲ್ಲಿ ಅವರು ಮುಜಿಬುರ್ ರೆಹಮಾನ್ ನಿವಾಸಕ್ಕೆ ಬೆಂಕಿ ಹಚ್ಚುವುದನ್ನು ನೋಡಬಹುದು. ಪ್ರತಿಭಟನಾಕಾರರ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸಲುವಾಗಿ ಅವರ ಮನವೊಲಿಸಲು ಸೇನೆಯು ಸ್ಥಳಕ್ಕೆ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಪಿಟಿಐ ವರದಿ ವಿವರಿಸಿದೆ.

560 ಜನರ ಸಾವಿಗೆ ಕಾರಣವಾದ ಅವಾಮಿ ಲೀಗ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯ ನಂತರ, ಆಗಸ್ಟ್ 5, 2024 ರಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈಗಲೂ ಅವರು ಭಾರತದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಹಸೀನಾ 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಹಸೀನಾ ಅವರ ಪಲಾಯನದ ಬಳಿಕ ಅವಾಮಿ ಲೀಗ್ ಸರ್ಕಾರ ಪತನಗೊಂಡಿದೆ. ನಂತರ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ಅವರು ಆಗಸ್ಟ್ 8ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬುಧವಾರ ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಆಯೋಜಿಸಿದ್ದ ಭಾಷಣದಲ್ಲಿ, ಹಸೀನಾ ಅವರು ಬಾಂಗ್ಲಾದೇಶದ ನಾಗರಿಕರು ಪ್ರಸ್ತುತ ಆಡಳಿತದ ವಿರುದ್ಧ ಪ್ರತಿರೋಧವನ್ನು ಸಂಘಟಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬಲಿಕೊಟ್ಟು ನಾವು ಗಳಿಸಿದ ರಾಷ್ಟ್ರಧ್ವಜ, ಸಂವಿಧಾನ ಮತ್ತು ಸ್ವಾತಂತ್ರ್ಯವನ್ನು ಬುಲ್ಡೋಝರ್ ಬಳಸಿ ನಾಶಮಾಡುವ ಶಕ್ತಿ ಅವರಿಗೆ ಇನ್ನೂ ಬಂದಿಲ್ಲ” ಎಂದು ಯೂನುಸ್ ಆಡಳಿತದ ಬಗ್ಗೆ ಹಸೀನಾ ಹೇಳಿರುವುದಾಗಿ ವರದಿ ತಿಳಿಸಿದೆ.

“ಅವರು ಕಟ್ಟಡಗಳನ್ನು ಕೆಡವಬಹುದು, ಆದರೆ ಇತಿಹಾಸವನ್ನಲ್ಲ. ಇತಿಹಾಸವು ತನ್ನ ಸೇಡನ್ನು ತೀರಿಸಿಕೊಳ್ಳಲಿದೆ ಎಂಬುವುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹಸೀನಾ ಹೇಳಿದ್ದಾರೆ.

ಮಂಗಳವಾರ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ ಇಂಕಿಲಾಬ್ ಮಂಚ್‌ನ ಸಂಚಾಲಕ ಮತ್ತು ಜಾತ್ಯ ನಾಗೋರಿಕ್ ಸಮಿತಿಯ ಸದಸ್ಯ ಷರೀಫ್ ಒಸ್ಮಾನ್ ಬಿನ್ ಹಾದಿ ಧನ್ಮೊಂಡಿ -32ರ ಕಡೆಗೆ ಮೆರವಣಿಗೆ ನಡೆಸಲು ಕರೆ ನೀಡಿದ್ದಾರೆ ಎಂದು ಪ್ರೋಥೋಮ್ ಅಲೋ ವರದಿ ತಿಳಿಸಿದೆ.

“ಪ್ಯಾಸಿಸಂನ ಪವಿತ್ರ ಸ್ಥಳದಿಂದ ಬಾಂಗ್ಲಾದೇಶ ಇಂದು ಮುಕ್ತಿ ಹೊಂದಲಿದೆ” ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಚಾಲಕ ಹಸ್ನತ್ ಅಬ್ದುಲ್ಲಾ ಕೂಡ ಬುಧವಾರ ಸಂಜೆ 7 ಗಂಟೆಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದರು ಎಂದು ವರದಿ ಹೇಳಿದೆ.

2024ರ ಆಗಸ್ಟ್ 5 ರಂದು ಕೂಡ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...