Homeಅಂತರಾಷ್ಟ್ರೀಯಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

ಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

- Advertisement -
- Advertisement -

ಬಾಂಗ್ಲಾದಲ್ಲಿನ ಅಶಾಂತಿ ಉಲ್ಬಣದಲ್ಲಿ, ನೂರಾರು ಪ್ರತಿಭಟನಾಕಾರರು ಸೋಮವಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದರು, ದೇಶದ ರಾಜಧಾನಿ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಪ್ರತಿಭಟನಾಕಾರರು ಬಾಂಗ್ಲಾದೇಶದ ಗೌರವಾನ್ವಿತ ವ್ಯಕ್ತಿ, ಶೇಖ್ ಹಸೀನಾ ಅವರ ತಂದೆ ಮತ್ತು ರಾಷ್ಟ್ರದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು. ಪ್ರತಿಮೆಯ ತಲೆಯ ಮೇಲೆ ಕೊಡಲಿಯಿಂದ ಜಖಂಗೊಳಿಸಲು ಪ್ರಯತ್ನ ನಡೆಸುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾಂಗ್ಲಾದೇಶದಲ್ಲಿ ಹದಗೆಟ್ಟ ರಾಜಕೀಯ ಪರಿಸ್ಥಿತಿಯನ್ನು ಉಲ್ಲೇಖಿಸಿ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಕೆಲವೇ ದಿನಗಳಲ್ಲಿ ಅಶಾಂತಿ ಭುಗಿಲೆದ್ದಿತು. ಆಕೆಯ ಹಠಾತ್ ನಿರ್ಗಮನವು ದೇಶವನ್ನು ಪ್ರಕ್ಷುಬ್ಧಗೊಳಿಸಿದೆ, ವ್ಯಾಪಕ ಪ್ರತಿಭಟನೆಗಳು ಮತ್ತು ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗಳು ನಡೆದಿವೆ.

ಸಹೋದರಿಯೊಂದಿಗೆ ದೇಶ ತೊರೆದ ಶೇಖ್ ಹಸೀನಾ

ಶೇಖ್ ಹಸೀನಾ ಮತ್ತು ಆಕೆಯ ಸಹೋದರಿ ಶೇಖ್ ರೆಹಾನಾ ಅವರು ಅಜ್ಞಾತ ಸ್ಥಳಕ್ಕಾಗಿ ಢಾಕಾದಿಂದ ಪಲಾಯನ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್, ಫ್ಲೈಟ್ ರಾಡಾರ್ ಬಾಂಗ್ಲಾದೇಶದ ವಾಯುಪಡೆಯ ವಿಮಾನ ಬಾಂಗ್ಲಾದೇಶದಿಂದ ಹೊರಟು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿದೆ ಎಂದು ವರದಿ ಮಾಡಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಈ ವಿಮಾನದಲ್ಲಿದ್ದರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಧನ್ಮಂಡಿಯಲ್ಲಿರುವ ಅವಾಮಿ ಲೀಗ್ ಅಧ್ಯಕ್ಷ ಶೇಖ್ ಹಸೀನಾ ಅವರ ಕಚೇರಿಗೂ ಚಳವಳಿಗಾರರು ಬೆಂಕಿ ಹಚ್ಚಿದರು. ಶೇಖ್ ಹಸೀನಾ ರಾಜೀನಾಮೆ ಸುದ್ದಿ ಕೇಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸುತ್ತಿದ್ದರು.

ಶಾಂತವಾಗಿರುವಂತೆ ಸೇನಾ ಮುಖ್ಯಸ್ಥರ ಮನವಿ

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಝಮಾನ್ ದೂರದರ್ಶನದ ಭಾಷಣದಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದಾರೆ ಎಂದು ದೃಢಪಡಿಸಿದರು. ರಾಷ್ಟ್ರೀಯ ಭಾಷಣದಲ್ಲಿ ಜಮಾನ್ ಪ್ರತಿಭಟನಾಕಾರರಿಗೆ ಶಾಂತವಾಗಿರಲು ಮತ್ತು ಮನೆಗೆ ಮರಳಲು ಮನವಿ ಮಾಡಿದರು. ಹಿಂಸಾಚಾರವನ್ನು ಕೊನೆಗೊಳಿಸುವಂತೆ ನಾಗರಿಕರನ್ನು ಒತ್ತಾಯಿಸಿದರು. ಕರ್ಫ್ಯೂ ಅಥವಾ ತುರ್ತು ಕ್ರಮಗಳ ಅಗತ್ಯವಿಲ್ಲ ಎಂದು ಹೇಳಿದರು.

“ಇದೀಗ ರಾಜಕೀಯ ಸ್ಥಿತ್ಯಂತರ ಕಾಲ ನಡೆಯುತ್ತಿದ್ದು, ಮಧ್ಯಂತರ ಸರ್ಕಾರ ರಚನೆಯಾಗಲಿದೆ” ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. “ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ, ನೀವು ನನ್ನ ಮೇಲೆ ನಂಬಿಕೆ ಇಡಿ, ಜೊತೆಯಾಗಿ ಕೆಲಸ ಮಾಡೋಣ. ದಯವಿಟ್ಟು ಸಹಾಯ ಮಾಡಿ, ಹೋರಾಟದಿಂದ ನಮಗೆ ಏನೂ ಸಿಗುವುದಿಲ್ಲ. ಸಂಘರ್ಷ ತಪ್ಪಿಸಿ, ನಾವೆಲ್ಲರೂ ಸೇರಿ ಸುಂದರ ದೇಶವನ್ನು ಕಟ್ಟಿದ್ದೇವೆ” ಎಂದರು.

ಅಶಾಂತಿಗೆ ಕಾರಣವೇನು?

ನಿರಾಶೆಗೊಂಡ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದವು. ಆದರೆ, ಈ ಹೋರಾಟಗಳು ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ವಿರುದ್ಧದ ದಂಗೆಯಾಗಿ ಮಾರ್ಪಟ್ಟಿವೆ. ಇತ್ತೀಚಿನ ವಾರಗಳಲ್ಲಿ ಕನಿಷ್ಠ 11,000 ಜನರನ್ನು ಬಂಧಿಸಲಾಗಿದೆ. ಅಶಾಂತಿಯು ದೇಶಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...