Homeಅಂತರಾಷ್ಟ್ರೀಯಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

ಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

- Advertisement -
- Advertisement -

ಬಾಂಗ್ಲಾದಲ್ಲಿನ ಅಶಾಂತಿ ಉಲ್ಬಣದಲ್ಲಿ, ನೂರಾರು ಪ್ರತಿಭಟನಾಕಾರರು ಸೋಮವಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದರು, ದೇಶದ ರಾಜಧಾನಿ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಪ್ರತಿಭಟನಾಕಾರರು ಬಾಂಗ್ಲಾದೇಶದ ಗೌರವಾನ್ವಿತ ವ್ಯಕ್ತಿ, ಶೇಖ್ ಹಸೀನಾ ಅವರ ತಂದೆ ಮತ್ತು ರಾಷ್ಟ್ರದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು. ಪ್ರತಿಮೆಯ ತಲೆಯ ಮೇಲೆ ಕೊಡಲಿಯಿಂದ ಜಖಂಗೊಳಿಸಲು ಪ್ರಯತ್ನ ನಡೆಸುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾಂಗ್ಲಾದೇಶದಲ್ಲಿ ಹದಗೆಟ್ಟ ರಾಜಕೀಯ ಪರಿಸ್ಥಿತಿಯನ್ನು ಉಲ್ಲೇಖಿಸಿ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಕೆಲವೇ ದಿನಗಳಲ್ಲಿ ಅಶಾಂತಿ ಭುಗಿಲೆದ್ದಿತು. ಆಕೆಯ ಹಠಾತ್ ನಿರ್ಗಮನವು ದೇಶವನ್ನು ಪ್ರಕ್ಷುಬ್ಧಗೊಳಿಸಿದೆ, ವ್ಯಾಪಕ ಪ್ರತಿಭಟನೆಗಳು ಮತ್ತು ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗಳು ನಡೆದಿವೆ.

ಸಹೋದರಿಯೊಂದಿಗೆ ದೇಶ ತೊರೆದ ಶೇಖ್ ಹಸೀನಾ

ಶೇಖ್ ಹಸೀನಾ ಮತ್ತು ಆಕೆಯ ಸಹೋದರಿ ಶೇಖ್ ರೆಹಾನಾ ಅವರು ಅಜ್ಞಾತ ಸ್ಥಳಕ್ಕಾಗಿ ಢಾಕಾದಿಂದ ಪಲಾಯನ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್, ಫ್ಲೈಟ್ ರಾಡಾರ್ ಬಾಂಗ್ಲಾದೇಶದ ವಾಯುಪಡೆಯ ವಿಮಾನ ಬಾಂಗ್ಲಾದೇಶದಿಂದ ಹೊರಟು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿದೆ ಎಂದು ವರದಿ ಮಾಡಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಈ ವಿಮಾನದಲ್ಲಿದ್ದರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಧನ್ಮಂಡಿಯಲ್ಲಿರುವ ಅವಾಮಿ ಲೀಗ್ ಅಧ್ಯಕ್ಷ ಶೇಖ್ ಹಸೀನಾ ಅವರ ಕಚೇರಿಗೂ ಚಳವಳಿಗಾರರು ಬೆಂಕಿ ಹಚ್ಚಿದರು. ಶೇಖ್ ಹಸೀನಾ ರಾಜೀನಾಮೆ ಸುದ್ದಿ ಕೇಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸುತ್ತಿದ್ದರು.

ಶಾಂತವಾಗಿರುವಂತೆ ಸೇನಾ ಮುಖ್ಯಸ್ಥರ ಮನವಿ

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಝಮಾನ್ ದೂರದರ್ಶನದ ಭಾಷಣದಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದಾರೆ ಎಂದು ದೃಢಪಡಿಸಿದರು. ರಾಷ್ಟ್ರೀಯ ಭಾಷಣದಲ್ಲಿ ಜಮಾನ್ ಪ್ರತಿಭಟನಾಕಾರರಿಗೆ ಶಾಂತವಾಗಿರಲು ಮತ್ತು ಮನೆಗೆ ಮರಳಲು ಮನವಿ ಮಾಡಿದರು. ಹಿಂಸಾಚಾರವನ್ನು ಕೊನೆಗೊಳಿಸುವಂತೆ ನಾಗರಿಕರನ್ನು ಒತ್ತಾಯಿಸಿದರು. ಕರ್ಫ್ಯೂ ಅಥವಾ ತುರ್ತು ಕ್ರಮಗಳ ಅಗತ್ಯವಿಲ್ಲ ಎಂದು ಹೇಳಿದರು.

“ಇದೀಗ ರಾಜಕೀಯ ಸ್ಥಿತ್ಯಂತರ ಕಾಲ ನಡೆಯುತ್ತಿದ್ದು, ಮಧ್ಯಂತರ ಸರ್ಕಾರ ರಚನೆಯಾಗಲಿದೆ” ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. “ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ, ನೀವು ನನ್ನ ಮೇಲೆ ನಂಬಿಕೆ ಇಡಿ, ಜೊತೆಯಾಗಿ ಕೆಲಸ ಮಾಡೋಣ. ದಯವಿಟ್ಟು ಸಹಾಯ ಮಾಡಿ, ಹೋರಾಟದಿಂದ ನಮಗೆ ಏನೂ ಸಿಗುವುದಿಲ್ಲ. ಸಂಘರ್ಷ ತಪ್ಪಿಸಿ, ನಾವೆಲ್ಲರೂ ಸೇರಿ ಸುಂದರ ದೇಶವನ್ನು ಕಟ್ಟಿದ್ದೇವೆ” ಎಂದರು.

ಅಶಾಂತಿಗೆ ಕಾರಣವೇನು?

ನಿರಾಶೆಗೊಂಡ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದವು. ಆದರೆ, ಈ ಹೋರಾಟಗಳು ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ವಿರುದ್ಧದ ದಂಗೆಯಾಗಿ ಮಾರ್ಪಟ್ಟಿವೆ. ಇತ್ತೀಚಿನ ವಾರಗಳಲ್ಲಿ ಕನಿಷ್ಠ 11,000 ಜನರನ್ನು ಬಂಧಿಸಲಾಗಿದೆ. ಅಶಾಂತಿಯು ದೇಶಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...