Homeಮುಖಪುಟಇವಿಎಂ ಬದಲು ಬ್ಯಾಲೆಟ್ ಪೇಪರ್‌ ಮತದಾನಕ್ಕೆ ಮರಳಿದ ಬಾಂಗ್ಲಾದೇಶ

ಇವಿಎಂ ಬದಲು ಬ್ಯಾಲೆಟ್ ಪೇಪರ್‌ ಮತದಾನಕ್ಕೆ ಮರಳಿದ ಬಾಂಗ್ಲಾದೇಶ

- Advertisement -
- Advertisement -

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಪ್ರಭಾವ ಬೀರಬಹುದಾದ ಮಹತ್ವದ ಕ್ರಮವನ್ನು ನೆರೆಯ ಬಾಂಗ್ಲಾದೇಶ ತೆಗೆದುಕೊಂಡಿದೆ. ಮತದಾನಕ್ಕಾಗಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ಬದಲು ಬ್ಯಾಲೇಟ್ ಪೇಪರ್‌ ಬಳಸಲು ಬಾಂಗ್ಲಾ ಮುಂದಾಗಿದೆ ಎಂದು ‘ನ್ಯಾಷನಲ್‌ ಹೆರಾಲ್ಡ್‌’ ವರದಿ ಮಾಡಿದೆ.

ಮತದಾನಕ್ಕಾಗಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ರದ್ದುಗೊಳಿಸಿರುವ ಬಾಂಗ್ಲಾದೇಶ ಚುನಾವಣಾ ಆಯೋಗವು (ಬಿಇಸಿ) ಮುಂದಿನ ಸಂಸತ್ತಿನ ಚುನಾವಣೆಯಲ್ಲಿ ಇವಿಎಂಗಳನ್ನು ಬಳಸದಿರಲು ನಿರ್ಧರಿಸಿದೆ. ಮುಂದಿನ ಜನವರಿ 24ರಂದು ಚುನಾವಣೆ ನಡೆಯಬಹುದು.

ಎಲ್ಲಾ 300 ಸಂಸದೀಯ ಸ್ಥಾನಗಳಿಗೆ ಬ್ಯಾಲೆಟ್ ಪೇಪರ್‌ಗಳು ಮತ್ತು ಪಾರದರ್ಶಕ ಬ್ಯಾಲೆಟ್ ಬಾಕ್ಸ್‌ಗಳನ್ನು ಬಳಸಿಕೊಂಡು ಮುಂದಿನ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಬಿಇಸಿ ನಿರ್ಧರಿಸಿದೆ ಎಂದು ಬಾಂಗ್ಲಾದೇಶದ ಚುನಾವಣಾ ಆಯುಕ್ತರು ಸೋಮವಾರ ತಿಳಿಸಿದ್ದಾರೆ.

“ಈ ಹಿಂದೆ, ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ 150 ಕ್ಷೇತ್ರಗಳಲ್ಲಿ ಮಾತ್ರ ಇವಿಎಂ ಬಳಸುವ ಯೋಜನೆಯನ್ನು ಚುನಾವಣಾ ಆಯೋಗ ಕೈಗೆತ್ತಿಕೊಂಡಿತ್ತು. ಆದರೆ, ಚುನಾವಣಾ ಆಯೋಗ ಯೋಜಿಸಿದ್ದ 8700 ಕೋಟಿ ಟಾಕಾ (ಬಾಂಗ್ಲಾದೇಶದ ಕರೆನ್ಸಿ) ಪ್ರಸ್ತಾವನೆಯನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗಲಿಲ್ಲ. ಇವಿಎಂಗಳ ನವೀಕರಣವನ್ನು ಸಹ ಸರ್ಕಾರವು ಅನುಮೋದಿಸಿರಲಿಲ್ಲ” ಎಂದು ಎಐಆರ್‌ ವರದಿ ಮಾಡಿದೆ.

ಕುತೂಹಲಕಾರಿ ಸಂಗತಿಯೆಂದರೆ ಇವಿಎಂಗಳನ್ನು ರದ್ದುಗೊಳಿಸುತ್ತಿರುವುದಕ್ಕೆ ಯಾವುದೇ ಕಾರಣವನ್ನು ಬಾಂಗ್ಲಾ ಚುನಾವಣಾ ಆಯೋಗ ನೀಡಿಲ್ಲ. ಇವಿಎಂಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಸೇರಿದಂತೆ ಪ್ರತಿಪಕ್ಷಗಳು ಆರೋಪಿಸಿದ್ದರಿಂದ ಜನರ ವಿಶ್ವಾಸಾರ್ಹತೆಯನ್ನು ಪಡೆಯುವುದಕ್ಕೆ ಶೇಖ್ ಹಸೀನಾ ಸರ್ಕಾರ ಬಯಸಲಿದೆ ಎಂದು ಊಹಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬಾಂಗ್ಲಾದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಇವಿಎಂಗಳನ್ನು ಬಳಸುವುದಿಲ್ಲ. ಮಾಧ್ಯಮಗಳ ವರದಿ ಪ್ರಕಾರ ಈ ಬಾರಿ ಕನಿಷ್ಠ 150 ಕ್ಷೇತ್ರಗಳಲ್ಲಿ ಇವಿಎಂ ಮೂಲಕ ಮತದಾನ ನಡೆಸಲು ಬಿಇಸಿ ಸಿದ್ಧತೆ ನಡೆಸಿದೆ.

ಮತದಾನಕ್ಕಾಗಿ ಹಳೆಯ ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಹಿಂತಿರುಗಲು ಬಾಂಗ್ಲಾದೇಶ ನಿರ್ಧಾರ ಕೈಗೊಂಡಿರುವುದಿರಂದ ಭಾರತದಲ್ಲೂ ಚರ್ಚೆ ಹುಟ್ಟಿಕೊಳ್ಳಬಹುದು, ಇವಿಎಂ ಬದಲು ಬ್ಯಾಲೆಟ್ ಪೇಪರ್‌ ಬಳಸಿ ಎಂಬ ಬೇಡಿಕೆಗೆ ಮರುಜೀವ ಬರಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ. ಮತದಾನ ವ್ಯವಸ್ಥೆಯಲ್ಲಿ ಇವಿಎಂಗಳ ದುರ್ಬಳಕೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ತೀವ್ರ ಕಳವಳ ವ್ಯಕ್ತಪಡಿಸುತ್ತಾ ಬಂದಿವೆ.

ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಕೇಂದ್ರ ಸರ್ಕಾರ ಪದೇ ಪದೇ ಈ ಬೇಡಿಕೆಯನ್ನು ತಿರುಸ್ಕರಿಸುತ್ತಾ ಬಂದಿವೆ ಎಂದು ‘ನ್ಯಾಷನಲ್‌ ಹೆರಾಲ್ಡ್‌’ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...