Homeಅಂತರಾಷ್ಟ್ರೀಯಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

- Advertisement -
- Advertisement -

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಂಗ್ಲಾದೇಶದ ಇಸ್ಕಾನ್‌ನ ಮಾಜಿ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಅಲ್ಲಿನ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ. ದೇಶದ ಸುಪ್ರೀಂಕೋರ್ಟ್ ಹೈಕೋರ್ಟ್‌ನ ಜಾಮೀನು ಆದೇಶವನ್ನು ತಡೆಹಿಡಿಯದ ಹೊರತು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ವಕೀಲರು ಳಿಸಿದ್ದಾರೆ. ಬಾಂಗ್ಲಾದೇಶ

ಚಿನ್ಮಯ್ ದಾಸ್ ಅವರು ನವೆಂಬರ್ 25 ರಿಂದ ಜೈಲಿನಲ್ಲಿದ್ದಾರೆ. ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಪ್ರತಿಪಾದಿಸುವ ಸಂಘಟನೆಯಾದ ಸಮ್ಮಿಲಿಟೊ ಸನಾತನಿ ಜಾಗರೋನ್ ಜೋಟ್‌ನ ವಕ್ತಾರರಾಗಿದ್ದಾರೆ.

ಅಕ್ಟೋಬರ್ 25 ರಂದು ಚಿತ್ತಗಾಂಗ್‌ನಲ್ಲಿ ನಡೆದ ರ್ಯಾಲಿಯಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜವನ್ನು ಅಗೌರವಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ನವೆಂಬರ್‌ನಲ್ಲಿ ದಾಸ್ ಬಂಧನದ ನಂತರ, ಭಾರತದ ವಿದೇಶಾಂಗ ಸಚಿವಾಲಯವು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿಗಳ ಬಗ್ಗೆ ತನ್ನ ಕಳವಳವನ್ನು ಪುನರುಚ್ಚರಿಸಿತ್ತು ಮತ್ತು ಚಿನ್ಮಯ್ ದಾಸ್ ಅವರಿಗೆ “ನ್ಯಾಯಯುತ ಮತ್ತು ಪಾರದರ್ಶಕ” ವಿಚಾರಣೆಗೆ ಕರೆ ನೀಡಿತ್ತು.

“ಈ ವಿಷಯದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ – ಮಧ್ಯಂತರ ಸರ್ಕಾರವು ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಉಗ್ರಗಾಮಿ ಹೇಳಿಕೆ, ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಪ್ರಚೋದನೆಯ ಘಟನೆಗಳ ಬಗ್ಗೆ ನಾವು ಕಳವಳಗೊಂಡಿದ್ದೇವೆ… ಇಸ್ಕಾನ್ ಸಾಮಾಜಿಕ ಸೇವೆಯ ದಾಖಲೆಯನ್ನು ಹೊಂದಿರುವ ಜಾಗತಿಕವಾಗಿ ಪ್ರಸಿದ್ಧ ಸಂಸ್ಥೆಯಾಗಿದೆ.” ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು, ಚಿನ್ಮಯ್ ದಾಸ್ ಬಂಧನದ ಸುತ್ತಲಿನ ಬೆಳವಣಿಗೆಗಳು ತಮ್ಮ ದೇಶದ “ಆಂತರಿಕ ವ್ಯವಹಾರಗಳಾಗಿವೆ” ಎಂದು ಹೇಳಿತ್ತು.

“ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಅವರ ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಒಳಗೊಂಡಂತೆ ಅವರ ಹಕ್ಕನ್ನು ರಕ್ಷಿಸಬೇಕು” ಎಂಬ ಭಾರತದ ಹೇಳಿಕೆಯನ್ನು ಅದು ತಿರಸ್ಕರಿಸಿತ್ತು.

ಈ ನಡುವೆ, ಚಿನ್ಮಯ್ ದಾಸ್ ಅವರು ಇನ್ನು ಮುಂದೆ ನಮ್ಮ ಗುಂಪಿನೊಂದಿಗೆ ಸಂಬಂಧ ಹೊಂದಿಲ್ಲ ಎಂದು ಇಸ್ಕಾನ್ ಹೇಳಿತ್ತು. ಅದಾಗ್ಯೂ, ಹಿಂದೂಗಳು ಮತ್ತು ಅವರ ಪೂಜಾ ಸ್ಥಳಗಳನ್ನು ರಕ್ಷಿಸಲು ಶಾಂತಿಯುತ ಪ್ರತಿಭಟನೆಗೆ ಕರೆ ನೀಡುವ ಅವರ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕೆ ತಮ್ಮ ಬೆಂಬಲವಿದೆ ಎಂದು ಅದು ಒತ್ತಿ ಹೇಳಿತ್ತು.

ಜನವರಿ 2 ರಂದು ಬಾಂಗ್ಲಾದೇಶದ ನ್ಯಾಯಾಲಯವು ಚಿನ್ಮಯ್ ದಾಸ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನವೆಂಬರ್ 29 ರಂದು, ಬಾಂಗ್ಲಾದೇಶ ಪೊಲೀಸರು ಇಬ್ಬರು ಹಿಂದೂ ಸನ್ಯಾಸಿಗಳನ್ನು ಬಂಧಿಸಿ ಜೈಲಿನಲ್ಲಿದ್ದ ಚಿನ್ಮಯ್ ದಾಸ್‌ ಅವರಿಗೆ ಔಷಧಿಗಳನ್ನು ತಲುಪಿಸಿದ್ದರು. ಇದರ ನಂತರ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ.

ಆಗಸ್ಟ್‌ನಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ, ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ವರದಿಯಾಗಿವೆ.

ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಒತ್ತಾಯಿಸಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಯ ವರದಿಗಳು ಉತ್ಪ್ರೇಕ್ಷಿತ ಎಂದು ಯೂನಸ್ ಆ ಸಮಯದಲ್ಲಿ ಹೇಳಿಕೊಂಡಿದ್ದರು. ಬಾಂಗ್ಲಾದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...