Homeಮುಖಪುಟ'ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು' : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

- Advertisement -
- Advertisement -

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ ಸಿಂಧೂರ್‌ನಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಿದಂತೆಯೇ ಅವರಿಗೂ ಪಾಠ ಕಲಿಸಬೇಕು” ಎಂದು ಹೇಳಿದ್ದಾರೆ.

ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ 27 ವರ್ಷದ ದೀಪು ಚಂದ್ರ ದಾಸ್ ಅವರನ್ನು ಬಾಂಗ್ಲಾದಲ್ಲಿ ಗುಂಪು ಹತ್ಯೆಗೈದಿರುವುದನ್ನು ಖಂಡಿಸಿ, ಡಿಸೆಂಬರ್ 22ರಿಂದ ಬಾಂಗ್ಲಾದೇಶದ ಉಪ ಹೈಕಮಿಷನ್ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಡಿಸೆಂಬರ್ 18ರಂದು ದೀಪು ಅವರನ್ನು ಬಾಂಗ್ಲಾದ ಮೆಯ್ಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪು ಹತ್ಯೆಗೈದು, ಬಳಿಕ ಅವರ ದೇಹವನ್ನು ಮರಕ್ಕೆ ತೂಗುಹಾಕಿ ಬೆಂಕಿ ಹಚ್ಚಲಾಗಿತ್ತು.

ಅಧಿಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಬಿಜೆಪಿ “ದ್ವೇಷ ಮತ್ತು ಅಸಹಿಷ್ಣುತೆಯನ್ನು ಒಂದು ಕಲಾರೂಪವಾಗಿ ಪರಿವರ್ತಿಸಿದೆ” ಎಂದು ಹೇಳಿದೆ.

“ಸುವೇಂದು ಅಧಿಕಾರಿ ತನ್ನ ವಿಷಪೂರಿತ ಧ್ವನಿಯಲ್ಲಿ ಮತ್ತೊಮ್ಮೆ ತನ್ನ ಫ್ಯಾಸಿಸ್ಟ್ ಕೋರೆಹಲ್ಲುಗಳನ್ನು ಹೊರತೆಗೆದು, ಇಸ್ರೇಲ್ ಗಾಝಾಗೆ ಕಲಿಸಿದಂತೆ ಭಾರತವು ಮುಸ್ಲಿಮರಿಗೆ ಪಾಠ ಕಲಿಸಬೇಕು ಎಂದು ಘೋಷಿಸುವ ಮೂಲಕ ನರಮೇಧದ ಪಿತ್ತವನ್ನು ಕಾರಿದ್ದಾರೆ. ಇದು ಬಹಿರಂಗ ದ್ವೇಷ ಭಾಷಣ, ಸಾಮೂಹಿಕ ಹತ್ಯೆ ಮತ್ತು ಜನಾಂಗೀಯ ಶುದ್ಧೀಕರಣಕ್ಕಾಗಿ ಕೊಟ್ಟ ರಕ್ತಪಿಪಾಸು ಕರೆಯಾಗಿದೆ. ಇವರ ವಿರುದ್ದ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಬಂಧಿಸಿಲ್ಲ, ಕನಿಷ್ಠ ಕಾನೂನು ಕ್ರಮ ಜರುಗಿಸಿಲ್ಲ. ಈ ಹಿಟ್ಲರ್ ವರ್ತನೆಯ ಮೇಲೆ ಯಾವುದೇ ಯುಎಪಿಎ ವಿಧಿಸಲಾಗಿಲ್ಲ” ಎಂದಿದೆ.

ಐವರು ಸದಸ್ಯರ ನಿಯೋಗದೊಂದಿಗೆ ಅಧಿಕಾರಿ ಶುಕ್ರವಾರ ಬಾಂಗ್ಲಾದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಹೊರಬಂದ ಬಳಿಕ ರಾಜತಾಂತ್ರಿಕರ ಬಳಿ ನಮ್ಮ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಿರಲಿಲ್ಲ ಎಂದು ಹೇಳಿದ್ದಾರೆ.

“ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮ್ಯಾನ್ಮಾರ್ ರೋಹಿಂಗ್ಯಾಗಳಿಗೆ ಕಾಕ್ಸ್ ಬಜಾರ್‌ನಲ್ಲಿ ಆಶ್ರಯ ನೀಡಿದ್ದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ, ಹೀಗಿರುವಾಗ ಹಿಂದೂಗಳನ್ನು ಏಕೆ ಅನಿಯಂತ್ರಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದು ನಾನು ಅವರನ್ನು ಕೇಳಿದೆ? ಆ ದೇಶದಲ್ಲಿ ಎರಡು ಕೋಟಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ. ಗಡಿಯ ಈ ಬದಿಯಲ್ಲಿರುವ 100 ಕೋಟಿ ಹಿಂದೂಗಳು ಮೌನವಾಗಿ ಕುಳಿತು ನೋಡುತ್ತಾರೆ ಎಂದು ಅವರು ಭಾವಿಸಿದ್ದರೆ, ಅದು ತಪ್ಪು” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಉಪ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದಕ್ಕಾಗಿ ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಗಡಿಯ ಆ ಬದಿಯಲ್ಲಿರುವ ಮುಮ್ಮಮದ್ ಯೂನುಸ್ ಪೊಲೀಸರಿಗೂ ಇಲ್ಲಿನ ಮಮತಾ ಬ್ಯಾನರ್ಜಿ ಪೊಲೀಸರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ತಮ್ಮ ಯಜಮಾನರಿಗೆ ಕುರುಡಾಗಿ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಡಿಸೆಂಬರ್ 23 ರಂದು ಉಪ ಹೈಕಮಿಷನ್ ಮೇಲೆ ದಾಳಿ ಮಾಡಲು ಮುಂದಾದಾಗ ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಯ 19 ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಉಪ ಹೈಕಮಿಷನ್ ಕಚೇರಿಯ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನೆಲಕ್ಕೆ ಬಿಗಿಯಾಗಿ ಜೋಡಿಸಲಾದ ಲೋಹದ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ದಾಳಿಗಳು ನಿರಂತರವಾಗಿ ಮುಂದುವರಿದರೆ, ನೂರಾರು ಹಿಂದೂ ಸನ್ಯಾಸಿಗಳೊಂದಿಗೆ, ಇನ್ನೂ ದೊಡ್ಡ ಪಡೆಯೊಂದಿಗೆ ಹೈಕಮಿಷನ್ ಕಚೇರಿಗೆ ನುಗ್ಗುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

“ಗಂಗಾಸಾಗರ ಮೇಳಕ್ಕೆ ಹೋಗುವ ದಾರಿಯಲ್ಲಿ ಸನ್ಯಾಸಿಗಳು ಬಾಬುಘಾಟ್‌ನಲ್ಲಿ ಶಿಬಿರಗಳನ್ನು ಸ್ಥಾಪಿಸುತ್ತಾರೆ. ಮುಂದಿನ ವರ್ಷದ ಆರಂಭದಲ್ಲಿ ನಾನು ಗಂಗಾಸಾಗರದ ಐದು ಲಕ್ಷ ಹಿಂದೂ ಯಾತ್ರಿಕರೊಂದಿಗೆ ಹಿಂತಿರುಗುತ್ತೇನೆ ಮತ್ತು ಹೈಕಮಿಷನ್ ಕಚೇರಿಗೆ ಮೆರವಣಿ ಮಾಡುವ ಮೂಲಕ ಈ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...