Homeಮುಖಪುಟ'ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು' : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

- Advertisement -
- Advertisement -

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ ಸಿಂಧೂರ್‌ನಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಿದಂತೆಯೇ ಅವರಿಗೂ ಪಾಠ ಕಲಿಸಬೇಕು” ಎಂದು ಹೇಳಿದ್ದಾರೆ.

ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ 27 ವರ್ಷದ ದೀಪು ಚಂದ್ರ ದಾಸ್ ಅವರನ್ನು ಬಾಂಗ್ಲಾದಲ್ಲಿ ಗುಂಪು ಹತ್ಯೆಗೈದಿರುವುದನ್ನು ಖಂಡಿಸಿ, ಡಿಸೆಂಬರ್ 22ರಿಂದ ಬಾಂಗ್ಲಾದೇಶದ ಉಪ ಹೈಕಮಿಷನ್ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಡಿಸೆಂಬರ್ 18ರಂದು ದೀಪು ಅವರನ್ನು ಬಾಂಗ್ಲಾದ ಮೆಯ್ಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪು ಹತ್ಯೆಗೈದು, ಬಳಿಕ ಅವರ ದೇಹವನ್ನು ಮರಕ್ಕೆ ತೂಗುಹಾಕಿ ಬೆಂಕಿ ಹಚ್ಚಲಾಗಿತ್ತು.

ಅಧಿಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಬಿಜೆಪಿ “ದ್ವೇಷ ಮತ್ತು ಅಸಹಿಷ್ಣುತೆಯನ್ನು ಒಂದು ಕಲಾರೂಪವಾಗಿ ಪರಿವರ್ತಿಸಿದೆ” ಎಂದು ಹೇಳಿದೆ.

“ಸುವೇಂದು ಅಧಿಕಾರಿ ತನ್ನ ವಿಷಪೂರಿತ ಧ್ವನಿಯಲ್ಲಿ ಮತ್ತೊಮ್ಮೆ ತನ್ನ ಫ್ಯಾಸಿಸ್ಟ್ ಕೋರೆಹಲ್ಲುಗಳನ್ನು ಹೊರತೆಗೆದು, ಇಸ್ರೇಲ್ ಗಾಝಾಗೆ ಕಲಿಸಿದಂತೆ ಭಾರತವು ಮುಸ್ಲಿಮರಿಗೆ ಪಾಠ ಕಲಿಸಬೇಕು ಎಂದು ಘೋಷಿಸುವ ಮೂಲಕ ನರಮೇಧದ ಪಿತ್ತವನ್ನು ಕಾರಿದ್ದಾರೆ. ಇದು ಬಹಿರಂಗ ದ್ವೇಷ ಭಾಷಣ, ಸಾಮೂಹಿಕ ಹತ್ಯೆ ಮತ್ತು ಜನಾಂಗೀಯ ಶುದ್ಧೀಕರಣಕ್ಕಾಗಿ ಕೊಟ್ಟ ರಕ್ತಪಿಪಾಸು ಕರೆಯಾಗಿದೆ. ಇವರ ವಿರುದ್ದ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಬಂಧಿಸಿಲ್ಲ, ಕನಿಷ್ಠ ಕಾನೂನು ಕ್ರಮ ಜರುಗಿಸಿಲ್ಲ. ಈ ಹಿಟ್ಲರ್ ವರ್ತನೆಯ ಮೇಲೆ ಯಾವುದೇ ಯುಎಪಿಎ ವಿಧಿಸಲಾಗಿಲ್ಲ” ಎಂದಿದೆ.

ಐವರು ಸದಸ್ಯರ ನಿಯೋಗದೊಂದಿಗೆ ಅಧಿಕಾರಿ ಶುಕ್ರವಾರ ಬಾಂಗ್ಲಾದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಹೊರಬಂದ ಬಳಿಕ ರಾಜತಾಂತ್ರಿಕರ ಬಳಿ ನಮ್ಮ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಿರಲಿಲ್ಲ ಎಂದು ಹೇಳಿದ್ದಾರೆ.

“ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮ್ಯಾನ್ಮಾರ್ ರೋಹಿಂಗ್ಯಾಗಳಿಗೆ ಕಾಕ್ಸ್ ಬಜಾರ್‌ನಲ್ಲಿ ಆಶ್ರಯ ನೀಡಿದ್ದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ, ಹೀಗಿರುವಾಗ ಹಿಂದೂಗಳನ್ನು ಏಕೆ ಅನಿಯಂತ್ರಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದು ನಾನು ಅವರನ್ನು ಕೇಳಿದೆ? ಆ ದೇಶದಲ್ಲಿ ಎರಡು ಕೋಟಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ. ಗಡಿಯ ಈ ಬದಿಯಲ್ಲಿರುವ 100 ಕೋಟಿ ಹಿಂದೂಗಳು ಮೌನವಾಗಿ ಕುಳಿತು ನೋಡುತ್ತಾರೆ ಎಂದು ಅವರು ಭಾವಿಸಿದ್ದರೆ, ಅದು ತಪ್ಪು” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಉಪ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದಕ್ಕಾಗಿ ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಗಡಿಯ ಆ ಬದಿಯಲ್ಲಿರುವ ಮುಮ್ಮಮದ್ ಯೂನುಸ್ ಪೊಲೀಸರಿಗೂ ಇಲ್ಲಿನ ಮಮತಾ ಬ್ಯಾನರ್ಜಿ ಪೊಲೀಸರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ತಮ್ಮ ಯಜಮಾನರಿಗೆ ಕುರುಡಾಗಿ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಡಿಸೆಂಬರ್ 23 ರಂದು ಉಪ ಹೈಕಮಿಷನ್ ಮೇಲೆ ದಾಳಿ ಮಾಡಲು ಮುಂದಾದಾಗ ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಯ 19 ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಉಪ ಹೈಕಮಿಷನ್ ಕಚೇರಿಯ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನೆಲಕ್ಕೆ ಬಿಗಿಯಾಗಿ ಜೋಡಿಸಲಾದ ಲೋಹದ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ದಾಳಿಗಳು ನಿರಂತರವಾಗಿ ಮುಂದುವರಿದರೆ, ನೂರಾರು ಹಿಂದೂ ಸನ್ಯಾಸಿಗಳೊಂದಿಗೆ, ಇನ್ನೂ ದೊಡ್ಡ ಪಡೆಯೊಂದಿಗೆ ಹೈಕಮಿಷನ್ ಕಚೇರಿಗೆ ನುಗ್ಗುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

“ಗಂಗಾಸಾಗರ ಮೇಳಕ್ಕೆ ಹೋಗುವ ದಾರಿಯಲ್ಲಿ ಸನ್ಯಾಸಿಗಳು ಬಾಬುಘಾಟ್‌ನಲ್ಲಿ ಶಿಬಿರಗಳನ್ನು ಸ್ಥಾಪಿಸುತ್ತಾರೆ. ಮುಂದಿನ ವರ್ಷದ ಆರಂಭದಲ್ಲಿ ನಾನು ಗಂಗಾಸಾಗರದ ಐದು ಲಕ್ಷ ಹಿಂದೂ ಯಾತ್ರಿಕರೊಂದಿಗೆ ಹಿಂತಿರುಗುತ್ತೇನೆ ಮತ್ತು ಹೈಕಮಿಷನ್ ಕಚೇರಿಗೆ ಮೆರವಣಿ ಮಾಡುವ ಮೂಲಕ ಈ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...