Homeಮುಖಪುಟಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯ 6 ವರ್ಷಗಳ ಘನ ಸಾಧನೆಯಿದು ಎಂದು ರಾಹುಲ್ ಗಾಂಧಿ ವ್ಯಂಗ್ಯ

- Advertisement -
- Advertisement -

ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಕೆಳಗಿಳಿಯಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್‌) ಹೇಳಿದೆ. ಈ ವರ್ಷ ಶೇಕಡಾ 10.3 ರಷ್ಟು ಭಾರಿ ಪ್ರಮಾಣದಲ್ಲಿ ತಲಾ ಜಿಡಿಪಿ ಕುಸಿಯುವ ನಿರೀಕ್ಷೆಯಿದೆ ಇದ್ದು, ತಲಾ ಆದಾಯ ಜಿಡಿಪಿಯಲ್ಲಿ ಬಾಂಗ್ಲಾದೇಶವು ಭಾರತವನ್ನು ಹಿಂದಿಕ್ಕಲಿದೆ ಎಂದು ಅದು ಹೇಳಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಪ್ರಕಾರ, 2020 ರಲ್ಲಿ ಬಾಂಗ್ಲಾದೇಶದ ತಲಾ ಜಿಡಿಪಿಯು ಶೇ.4 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ, ಈ ಮೂಲಕ ಭಾರತವನ್ನು ಹಿಂದಿಕ್ಕಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಈ ಅಂದಾಜಿನ ಪ್ರಕಾರ, ಭಾರತವು ದಕ್ಷಿಣ ಏಷ್ಯಾದ ಮೂರನೇ ಬಡ ರಾಷ್ಟ್ರವಾಗಲಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಮಾತ್ರ ತಲಾ ಜಿಡಿಪಿ ಕುಸಿತ ಕಂಡಿದೆ. ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್ ಮತ್ತು ಶ್ರೀಲಂಕಾ ದೇಶಗಳು ಭಾರತವನ್ನು ಹಿಂದಿಕ್ಕಲಿವೆ.

ಡಬ್ಲ್ಯುಇಒ ದತ್ತಾಂಶದ ಪ್ರಕಾರ, ಕೊರೊನಾ ವೈರಸ್‌ನಿಂದಾಗಿ ಶ್ರೀಲಂಕಾದ ತಲಾ ಆದಾಯ ಶೇ.4 ರಷ್ಟು ಕುಸಿದಿದ್ದು, ಭಾರತವು ಅತಿ ಹೆಚ್ಚು ಹಿನ್ನಡೆಗೆ ಒಳಗಾಗಿದೆ. ಶ್ರೀಲಂಕಾ ತಲಾ ಆದಾಯ ಜಿಡಿಪಿ ಕುಸಿದಿದ್ದರೂ ಭಾರತವನ್ನು ಹಿಂದಿಕ್ಕಲಿದೆ.

ನೇಪಾಳ ಮತ್ತು ಭೂತಾನ್ ಈ ವರ್ಷ ತಮ್ಮ ಆರ್ಥಿಕತೆಯನ್ನು ಬೆಳೆಸಲು ತುಲನಾತ್ಮಕವಾಗಿ ಹೆಜ್ಜೆ ಇಡಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.

ಮುಂದಿನ ವರ್ಷ ಭಾರತದಲ್ಲಿ ತೀಕ್ಷ್ಣವಾದ ಆರ್ಥಿಕ ಚೇತರಿಕೆ ಕಾಣುವ ಸಾಧ್ಯತೆಯಿದೆ ಎಂದು ಐಎಂಎಫ್‌ ಹೇಳಿದೆ. ಒಂದು ವೇಳೆ 2021ರಲ್ಲಿ ಆರ್ಥಿಕ ಚೇತರಿಕೆ ಕಂಡಲ್ಲಿ ಬಾಂಗ್ಲಾದೇಶಕ್ಕಿಂತ ಕೊಂಚನೇ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಆದರೆ, ಬಾಂಗ್ಲಾದೇಶವೂ ಮತ್ತಷ್ಟು ಚೇತರಿಕೆ ಕಂಡಲ್ಲಿ ಅದೂ ಕೂಡ ಅಸಾಧ್ಯವೇ ಆಗಿದೆ.

ಐಎಮ್‌‌ಎಫ್‌ ವರದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, “ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯ 6 ವರ್ಷಗಳ ಘನ ಸಾಧನೆಯಿದು. ಭಾರತವನ್ನು ಹಿಂದಿಕ್ಕಲು ಬಾಂಗ್ಲಾದೇಶ ಸಜ್ಜಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...