Homeಮುಖಪುಟಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

- Advertisement -
- Advertisement -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆಯಾಗಿದ್ದರು.

“ಬಿಎನ್‌ಪಿ ಅಧ್ಯಕ್ಷೆ, ಮಾಜಿ ಪ್ರಧಾನಿ ಹಾಗೂ ರಾಷ್ಟ್ರೀಯ ನಾಯಕಿ ಬೇಗಂ ಖಾಲಿದಾ ಝಿಯಾ ಅವರು ಇಂದು ಬೆಳಿಗ್ಗೆ ಫಜ್ರ್ ಪ್ರಾರ್ಥನೆಯ ನಂತರ 6 ಗಂಟೆಗೆ ಕೊನೆಯುಸಿರೆಳೆದರು” ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. ಅವರ ಅಗಲಿಕೆಗೆ ಸಂತಾಪ ಸೂಚಿಸಿ, ಪ್ರಾರ್ಥನೆ ಸಲ್ಲಿಸುವಂತೆ ಬಿಎನ್‌ಪಿ ಮನವಿ ಮಾಡಿದೆ.

ವೈದ್ಯರ ಪ್ರಕಾರ, ಖಾಲಿದಾ ಝಿಯಾ ಅವರು ಯಕೃತ್ತಿನ ಸಮಸ್ಯೆ, ಸಂಧಿವಾತ, ಮಧುಮೇಹ ಹಾಗೂ ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮಗ ಹಾಗೂ ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ತಾಯಿಯನ್ನು ಭೇಟಿಮಾಡಿದ್ದರು.

ಖಾಲಿದಾ ಝಿಯಾ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಡುವಿನ ರಾಜಕೀಯ ಪೈಪೋಟಿ ದಶಕಗಳ ಕಾಲ ಬಾಂಗ್ಲಾದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಿತ್ತು. 1981ರಲ್ಲಿ ದಂಗೆಯಲ್ಲಿ ಹತ್ಯೆಯಾದ ಅಧ್ಯಕ್ಷ ಝಿಯಾವುರ್‌ ರೆಹಮಾನ್ ಅವರ ಪತ್ನಿಯಾದ ಖಾಲಿದಾ ಝಿಯಾ, ನಂತರ ಮಿಲಿಟರಿ ಆಡಳಿತದ ವಿರುದ್ಧ ನಡೆದ ಸಾಮೂಹಿಕ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಆಂದೋಲನದ ಫಲವಾಗಿ 1990ರಲ್ಲಿ ಮಿಲಿಟರಿ ಆಡಳಿತ ಪತನವಾಯಿತು.

1991ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದ ಖಾಲಿದಾ ಝಿಯಾ, 2001ರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅನೇಕ ಚುನಾವಣೆಗಳಲ್ಲಿ ಅವರ ಎದುರಾಳಿಯಾಗಿ ಶೇಖ್ ಹಸೀನಾ ಸ್ಪರ್ಧಿಸಿದ್ದರು. 2006ರಿಂದ ಅಧಿಕಾರದ ಹೊರಗಿದ್ದ ಅವರು, ರಾಜಕೀಯ ಪ್ರೇರಿತವೆಂದು ಹೇಳಲಾದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಹಾಗೂ ಗೃಹಬಂಧನ ಅನುಭವಿಸಿದ್ದರು.

ಜನವರಿ 2025ರಲ್ಲಿ, ಸುಪ್ರೀಂ ಕೋರ್ಟ್ ಖಾಲಿದಾ ಅವರನ್ನು ಕೊನೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು. ಇದು ಮುಂದಿನ (2026) ಫೆಬ್ರವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುತ್ತಿತ್ತು. ಈ ನಡುವೆ ಅವರು ನಿಧನರಾಗಿದ್ದಾರೆ.

2020ರಲ್ಲಿ ಅನಾರೋಗ್ಯದ ಕಾರಣ ಖಾಲಿದಾ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆ ಬಳಿಕ ಅವರ ಕುಟುಂಬ ವಿದೇಶದಲ್ಲಿ ಚಿಕಿತ್ಸೆ ನೀಡಲು ಕನಿಷ್ಠ 18 ಬಾರಿ ಶೇಖ್ ಹಸೀನಾ ಸರ್ಕಾರವನ್ನು ವಿನಂತಿಸಿತು. ಆದರೆ, ಈ ವಿನಂತಿಗಳನ್ನು ತಿರಸ್ಕರಿಸಲಾಯಿತು ಎಂದು ಬಿಎನ್‌ಪಿ ಹೇಳಿದೆ.

ಹಸೀನಾ ಸರ್ಕಾರ ಪತನಗೊಂಡ ಬಳಿಕ ರಚನೆಯಾದ ಮಧ್ಯಂತರ ಸರ್ಕಾರ ಈ ವರ್ಷ ಆರಂಭದಲ್ಲಿ ಖಾಲಿದಾ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಅನುಮತಿ ನೀಡಿತು. ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಿದ್ದ ಅವರು, ಮೇ ತಿಂಗಳಲ್ಲಿ ಸ್ವದೇಶಕ್ಕೆ ಮರಳಿದ್ದರು.

ಅಧಿಕಾರದಿಂದ ದೂರವಿದ್ದರೂ ಖಾಲಿದಾ ಝಿಯಾ ಹಾಗೂ ಅವರ ಮಧ್ಯ–ಬಲಪಂಥೀಯ ಬಿಎನ್‌ಪಿ ದೇಶದ ರಾಜಕೀಯದಲ್ಲಿ ಪ್ರಭಾವವನ್ನು ಉಳಿಸಿಕೊಂಡಿತ್ತು. ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ತಿನ ಚುನಾವಣೆಯಲ್ಲಿ ಬಿಎನ್‌ಪಿ ಮುಂಚೂಣಿಯಲ್ಲಿದೆ. ಸುಮಾರು 17 ವರ್ಷಗಳ ಸ್ವಯಂ ಗಡಿಪಾರು ಜೀವನದ ಬಳಿಕ ಇತ್ತೀಚೆಗೆ ದೇಶಕ್ಕೆ ಮರಳಿದ ತಾರಿಕ್ ರೆಹಮಾನ್ ಪ್ರಧಾನಿಯಾಗುವ ಪ್ರಬಲ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...