Homeಕರ್ನಾಟಕಮೊಬೈಲ್ ಅಂಗಡಿಯಲ್ಲಿ ಲೌಡ್‌ ಸ್ಪೀಕರ್‌ ವಿಚಾರಕ್ಕೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮೊಬೈಲ್ ಅಂಗಡಿಯಲ್ಲಿ ಲೌಡ್‌ ಸ್ಪೀಕರ್‌ ವಿಚಾರಕ್ಕೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

- Advertisement -
- Advertisement -

ಮೊಬೈಲ್ ಅಂಗಡಿಯಲ್ಲಿ ಜೋರಾಗಿ ಸ್ಪೀಕರ್ ಶಬ್ದ ಹಾಕಿದ್ದಕ್ಕೆ ಕೋಪಗೊಂಡು ಅಂಗಡಿ ಮಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಗೇಟ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲೇಮಾನ್(25), ಶಾನವಾಝ್(25) ರೋಹಿತ್(25) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ದಾನಿಶ್ ಮತ್ತು ತರುಣ ಎಂಬವರಿಗೆ ಶೋಧ ಕಾರ್ಯ ಮುಂದುವರಿದಿದೆ. ಅರೋಪಿಗಳ ವಿರುದ್ಧ ಐಪಿಸಿ ಸೆಕ್ಸನ್‌ 506, 504, 149, 307, 323 ಹಾಗೂ 324ರಡಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪಿನ ಜೊತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು, ಮಾತಿಗೆ ಮಾತು ಬೆಳೆದು ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್‍ ಮೇಲೆ ಹಲ್ಲೆ ಮಾಡುವುದು. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸೆರೆಯಾಗಿದೆ.

ಆದರೆ ಈ ಬಗ್ಗೆ ಸುಳ್ಳು ಆಯಾಮಗಳನ್ನು ನೀಡಿ ಕನ್ನಡ ಮಾದ್ಯಮಗಳು ಮತ್ತು ಬಿಜೆಪಿ ಪ್ರಚಾರವನ್ನು ಮಾಡಿತ್ತು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಎಂದು ಯುವಕನಿಗೆ ಥಳಿಸಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತಲಾಗಿತ್ತು. ದೂರುದಾರ ನೀಡಿದ ದೂರಿನಲ್ಲಿಯೂ ಆಝಾನ್, ಹನುಮಾನ್ ಚಾಲಿಸಾದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಆದರೆ ಬಿಜೆಪಿ ಚುನಾವಣೆ ಹೊಸ್ತಿಲಲ್ಲ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿ ರಾಜಕೀಯ ಲಾಭವನ್ನು ಪಡೆಯಲು ಮುಂದಾಗಿರುವುದು ವಿಪರ್ಯಾಸವಾಗಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಇದು ಸುಳ್ಳು ಆರೋಪ ಎನ್ನುವುದು ಬಯಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಇದನ್ನು ಓದಿ: ‘ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ..’; ಬಿಎಸ್‌ವೈ ಕುಟುಂಬ ರಾಜಕಾರಣವನ್ನು ಟೀಕಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...