ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿ ಖಾಸಗಿ ಬಸ್ಗಳು ನಿಲ್ಲಿಸಿದ್ದ ಶೆಡ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಬಸ್ಗಳ ಪೈಕಿ 6 ಬಸ್ಗಳಿಗೆ ಬೆಂಕಿ ತಗುಲಿದೆ.
ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
ಇದಾದ ಬಳಿಕ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್ಗಳು ಸ್ಫೋಟಗೊಂಡಿತ್ತು. ಈ ವೇಳೆ ಕಟ್ಟಡದಲ್ಲಿದ್ದ ಪ್ರೇಮ್ ಎಂಬವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದರು. ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿತ್ತು.
ಇದನ್ನು ಓದಿ: ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ